ಕೆ.ಆರ್.ಪೇಟೆ ತಾಲ್ಲೂಕಿನ 12 ಮಂದಿಯಲ್ಲಿ ರೋಗ ಪತ್ತೆಯಾಗಿದ್ದು ಮೂವರು ಜ್ವರದಿಂದ ಬಳಲುತ್ತಿದ್ದಾರೆ. ನಾಗಮಂಗಲದ 7 ಮಂದಿ, ಪಾಂಡವಪುರ ತಾಲ್ಲೂಕಿನ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್ನಿಂದ ಗುಣಮುಖರಾದ 19 ಮಂದಿಯನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 8, ಕೆ.ಆರ್.ಪೇಟೆ 4, ಮದ್ದೂರು 3, ನಾಗಮಂಗಲ 2, ಶ್ರೀರಂಗಪಟ್ಟಣ, ಮಳವಳ್ಳಿ ತಾಲ್ಲೂಕಿನ ತಲಾ ಒಬ್ಬರು ಆಸ್ಪತ್ರೆಯಿಂದ ಮನೆಗೆ ತೆರಳಿದರು.