ಹೆದ್ದಾರಿಗಳ ಮೂಲಕ ಜಿಲ್ಲೆ ಪ್ರವೇಶಿಸುತ್ತಿರುವ ಜನರನ್ನು ಚೆಕ್ಪೋಸ್ಟ್ಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ಗೆ ಒಳಪಡಿಸಲಾಗುತ್ತಿದೆ. ಜ್ವರ ಕಂಡು ಬಂದರೆ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ಳೂರು ಕ್ರಾಸ್, ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಿಡಘಟ್ಟ, ಶ್ರೀರಂಗಪಟ್ಟಣ ಸೇರಿ ಮಳವಳ್ಳಿ, ಕೆ.ಆರ್.ಪೇಟೆ, ದೇವಲಾಪುರದಲ್ಲಿ ತೆರೆಯಲಾಗಿರುವ ಚೆಕ್ಪೋಸ್ಟ್ಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.