<p><strong>ಮಂಡ್ಯ:</strong> ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಮಂಗಳವಾರ ಮೃತಪಟ್ಟಿದ್ಧಾರೆ. ಕೋವಿಡ್ನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.</p>.<p>ಮದ್ದೂರು ತಾಲ್ಲೂಕಿನ 1,44,176ನೇ ರೋಗಿ ನ್ಯುಮೋನಿಯಾ, ಉಸಿರಾಟದ ತೊಂದರೆ, ಜ್ವರಿಂದ ಬಳಲುತ್ತಿದ್ದರು. ಕೆ.ಆರ್.ಪೇಟೆ ತಾಲ್ಲೂಕಿನ 1,92,898ನೇ ರೋಗಿ ಕೂಡ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಂಗಳವಾರ ಕೋವಿಡ್ ಕಾರ್ಯಸೂಚಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು.</p>.<p>ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಹೊಸದಾಗಿ 174 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ. ಜಿಲ್ಲೆಯ ಒಟ್ಟು ರೋಗಿಗಳ ಸಂಖ್ಯೆ 3,554ಕ್ಕೆ ಏರಿಕೆಯಾಗಿದೆ.</p>.<p>ಮಂಡ್ಯ ತಾಲ್ಲೂಕಿನ 55 ಮಂದಿ, ಮದ್ದೂರಿನ 40, ಮಳವಳ್ಳಿ 12, ಪಾಂಡವಪುರ 19, ಶ್ರೀರಂಗಪಟ್ಟಣ 13, ಕೆ.ಆರ್.ಪೇಟೆ 10, ನಾಗಮಂಗಲ ತಾಲ್ಲೂಕಿನ 25 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲರನ್ನೂ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.</p>.<p>ಕೋವಿಡ್ನಿಂದ ಗುಣಮುಖರಾದ 130 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಇಲ್ಲಿಯವರೆಗೆ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 2,116ಕ್ಕೆ ಏರಿಕೆಯಾಗಿದೆ. 1,398 ಪ್ರಕರಣಗಳು ಸಕ್ರಿಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಮಂಗಳವಾರ ಮೃತಪಟ್ಟಿದ್ಧಾರೆ. ಕೋವಿಡ್ನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.</p>.<p>ಮದ್ದೂರು ತಾಲ್ಲೂಕಿನ 1,44,176ನೇ ರೋಗಿ ನ್ಯುಮೋನಿಯಾ, ಉಸಿರಾಟದ ತೊಂದರೆ, ಜ್ವರಿಂದ ಬಳಲುತ್ತಿದ್ದರು. ಕೆ.ಆರ್.ಪೇಟೆ ತಾಲ್ಲೂಕಿನ 1,92,898ನೇ ರೋಗಿ ಕೂಡ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಂಗಳವಾರ ಕೋವಿಡ್ ಕಾರ್ಯಸೂಚಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು.</p>.<p>ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಹೊಸದಾಗಿ 174 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ. ಜಿಲ್ಲೆಯ ಒಟ್ಟು ರೋಗಿಗಳ ಸಂಖ್ಯೆ 3,554ಕ್ಕೆ ಏರಿಕೆಯಾಗಿದೆ.</p>.<p>ಮಂಡ್ಯ ತಾಲ್ಲೂಕಿನ 55 ಮಂದಿ, ಮದ್ದೂರಿನ 40, ಮಳವಳ್ಳಿ 12, ಪಾಂಡವಪುರ 19, ಶ್ರೀರಂಗಪಟ್ಟಣ 13, ಕೆ.ಆರ್.ಪೇಟೆ 10, ನಾಗಮಂಗಲ ತಾಲ್ಲೂಕಿನ 25 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲರನ್ನೂ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.</p>.<p>ಕೋವಿಡ್ನಿಂದ ಗುಣಮುಖರಾದ 130 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಇಲ್ಲಿಯವರೆಗೆ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 2,116ಕ್ಕೆ ಏರಿಕೆಯಾಗಿದೆ. 1,398 ಪ್ರಕರಣಗಳು ಸಕ್ರಿಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>