ಮಳವಳ್ಳಿ ತಾಲ್ಲೂಕು, ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೋವಿಡ್–19 ದೃಢಪಟ್ಟಿತ್ತು. ಇದರಿಂದ ನೊಂದಿದ್ದ ಅವರು ಬುಧವಾರ ಮಧ್ಯರಾತ್ರಿ ಬಾತ್ರೂಂಗೆ ತೆರಳಿ, ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತರ ರೋಗಿಗಳು ಬಾತ್ರೂಂಗೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.