<p><strong>ಮಂಡ್ಯ:</strong> ನಗರದ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳು ನೃತ್ಯ ಮಾಡುತ್ತಾ, ಹಾಡು ಹೇಳುತ್ತಾ ಲವಲವಿಕೆಯಿಂದ ಕಾಲ ಕಳೆಯುತ್ತಿದ್ದಾರೆ. ಆ ಮೂಲಕ ಕೋವಿಡ್ ಭೀತಿ ತೊರೆಯುತ್ತಿದ್ದಾರೆ.</p>.<p>‘ಕುಲದಲ್ಲಿ ಕೀಳಾವುದೋ ಹುಚ್ಚಪ್ಪ’ ಗೀತೆಗೆ ರೋಗಿಗಳು ಹೆಜ್ಜೆ ಇಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೋಗಿಗಳ ನೃತ್ಯಕ್ಕೆ ವಾರ್ಡ್ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಪ್ರೋತ್ಸಾಹ ಮಾಡಿದ್ದಾರೆ.</p>.<p>ಕೆಲವರು ಸೆಲ್ಫಿ ವಿಡಿಯೊ ಮಾಡಿ, ಕೋವಿಡ್ ಆಸ್ಪತ್ರೆಯ ರೋಗಿಗಳನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ. ಊಟ ತಿಂಡಿಯಲ್ಲಿ ನಮಗೆ ಯಾವುದೇ ಕೊರತೆಯಾಗಿಲ್ಲ. ಕೋವಿಡ್ ಬಂದರೆ ಯಾರೂ ಹೆದರಬೇಕಾಗಿಲ್ಲ ಎಂದು ತಿಳಿಸಿದ್ದಾರೆ.</p>.<p>‘ದಾಖಲಾಗಿ ವಾರ ಕಳೆದ ನಂತರ ರೋಗಿಗಳನ್ನು ಪ್ರತ್ಯೇಕ ಮಾಡಲಾಗುತ್ತದೆ. ವಾರದೊಳಗಿನ ರೋಗಿಗಳಷ್ಟೇ ನೃತ್ಯ ಮಾಡಿದ್ದಾರೆ. ಅವರ ಖುಷಿಗೆ ನಾವು ಅಡ್ಡಿಪಡಿಸಿಲ್ಲ. ಆದರೂ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ್ದೇವೆ’ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನಗರದ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳು ನೃತ್ಯ ಮಾಡುತ್ತಾ, ಹಾಡು ಹೇಳುತ್ತಾ ಲವಲವಿಕೆಯಿಂದ ಕಾಲ ಕಳೆಯುತ್ತಿದ್ದಾರೆ. ಆ ಮೂಲಕ ಕೋವಿಡ್ ಭೀತಿ ತೊರೆಯುತ್ತಿದ್ದಾರೆ.</p>.<p>‘ಕುಲದಲ್ಲಿ ಕೀಳಾವುದೋ ಹುಚ್ಚಪ್ಪ’ ಗೀತೆಗೆ ರೋಗಿಗಳು ಹೆಜ್ಜೆ ಇಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೋಗಿಗಳ ನೃತ್ಯಕ್ಕೆ ವಾರ್ಡ್ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಪ್ರೋತ್ಸಾಹ ಮಾಡಿದ್ದಾರೆ.</p>.<p>ಕೆಲವರು ಸೆಲ್ಫಿ ವಿಡಿಯೊ ಮಾಡಿ, ಕೋವಿಡ್ ಆಸ್ಪತ್ರೆಯ ರೋಗಿಗಳನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದು ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ. ಊಟ ತಿಂಡಿಯಲ್ಲಿ ನಮಗೆ ಯಾವುದೇ ಕೊರತೆಯಾಗಿಲ್ಲ. ಕೋವಿಡ್ ಬಂದರೆ ಯಾರೂ ಹೆದರಬೇಕಾಗಿಲ್ಲ ಎಂದು ತಿಳಿಸಿದ್ದಾರೆ.</p>.<p>‘ದಾಖಲಾಗಿ ವಾರ ಕಳೆದ ನಂತರ ರೋಗಿಗಳನ್ನು ಪ್ರತ್ಯೇಕ ಮಾಡಲಾಗುತ್ತದೆ. ವಾರದೊಳಗಿನ ರೋಗಿಗಳಷ್ಟೇ ನೃತ್ಯ ಮಾಡಿದ್ದಾರೆ. ಅವರ ಖುಷಿಗೆ ನಾವು ಅಡ್ಡಿಪಡಿಸಿಲ್ಲ. ಆದರೂ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ್ದೇವೆ’ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>