ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ | 84 ಮಂದಿಗೆ ಸೋಂಕು

Last Updated 15 ಆಗಸ್ಟ್ 2020, 16:16 IST
ಅಕ್ಷರ ಗಾತ್ರ

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀರಂಗಪಟ್ಟಣ ತಾಲ್ಲೂಕಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

1,48, 014ನೇ ರೋಗಿ ತೀವ್ರ ಉಸಿರಾಟದ ಸಮಸ್ಯೆ, ಜ್ವರದಿಂದ ಬಳಲುತ್ತಿದ್ದರು. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕೋವಿಡ್‌ ಕಾರ್ಯಸೂಚಿಯಂತೆ ಶನಿವಾರ ಅವರ ಮೃತದೇಹ ಅಂತ್ಯಕ್ರಿಯೆ ನೆರವೇರಿಸಲಾಯಿತು.

84 ಮಂದಿಗೆ ಸೋಂಕು: ಶನಿವಾರ 84 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದ್ದು ಜಿಲ್ಲೆಯ ಒಟ್ಟು ರೋಗಿಗಳ ಸಂಖ್ಯೆ 3,263ಕ್ಕೆ ಏರಿಕೆಯಾಗಿದೆ. ಮಂಡ್ಯ ತಾಲ್ಲೂಕಿನ 14, ಮದ್ದೂರು 16, ಮಳವಳ್ಳಿ 16, ಪಾಂಡವಪುರ 17, ಶ್ರೀರಂಗಪಟ್ಟಣ 5, ಕೆ.ಆರ್‌.ಪೇಟೆಯ 7, ನಾಗಮಂಗಲ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಕೋವಿಡ್‌ನಿಂದ ಗುಣಮುಖರಾದ 36 ಮಂದಿಯನ್ನು ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಇಲ್ಲಿಯವರೆಗೆ 1,791 ಮಂದಿ ಗುಣಮುಖವಾಗಿದ್ದು 1,439 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT