<p><strong>ಮಂಡ್ಯ:</strong> ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀರಂಗಪಟ್ಟಣ ತಾಲ್ಲೂಕಿನ ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದು ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.</p>.<p>1,73,680ನೇ ರೋಗಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ, ತೀವ್ರ ಉಸಿರಾಟದ ಸಮಸ್ಯೆ ಹಾಗೂ ಜ್ವರದಿಂದ ಬಳಲುತ್ತಿದ್ದ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಅವರನ್ನು ಕೋವಿಡ್ ಕಾರ್ಯಸೂಚಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು.</p>.<p>ಸೋಮವಾರ 26 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 380ಕ್ಕೆ ಏರಿಕೆಯಾಗಿದೆ. ಮಂಡ್ಯ ತಾಲ್ಲೂಕಿನಲ್ಲಿ ಒಬ್ಬರು, ಮದ್ದೂರು 3, ಮಳವಳ್ಳಿ 2, ಶ್ರೀರಂಗಪಟ್ಟಣ 1, ಕೆ.ಆರ್.ಪೇಟೆ 4, ನಾಗಮಂಗಲ ತಾಲ್ಲೂಕಿನ 7 ಮಂದಿಗೆ ಕೋವಿಡ್ ಪತ್ತೆಯಾಗಿದೆ.</p>.<p>ಕೋವಿಡ್ನಿಂದ ಗುಣಮುಖರಾದ 82 ಮಂದಿಯನ್ನು ಸೋಮವಾರ ಬಿಡುಗಡೆ ಮಾಡಲಾಯಿತು. ಮಂಡ್ಯ 40, ಮದ್ದೂರು 5, ಶ್ರೀರಂಗಪಟ್ಟಣ 20, ಕೆ.ಆರ್.ಪೇಟೆ 12, ನಾಗಮಂಗಲ ತಾಲ್ಲೂಕಿನ 4 ಮಂದಿಯನ್ನು ಬಿಡುಗಡೆ ಮಾಡಲಾಯಿತು. ಒಟ್ಟು ರೋಗಿಗಳಲ್ಲಿ ಇಲ್ಲಿಯವರೆಗೂ 1,986 ಮಂದಿ ಗುಣಮುಖರಾಗಿದ್ದಾರೆ. 1,356 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಅಸಮಾಧಾನ: ಕೋವಿಡ್ ರೋಗಿಗಳು ಪತ್ತೆಯಾದ ಮನೆ ಹಾಗೂ ಬೀದಿಗಳಲ್ಲಿ ಸೋಂಕುನಿವಾರಕ ಸಿಂಪಡಣೆ ಮಾಡುತ್ತಿಲ್ಲ ಎಂದು ವಿವಿಧೆಡೆ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾವೇರಿ ನಗರ, ಕಣ್ವ ಮಾರ್ಗದಲ್ಲಿ ಪತ್ತೆಯಾದ ಪತ್ತೆಯಾದ ರೋಗಿಯ ಮನೆ, ಬೀದಿಯಲ್ಲಿ ಸೋಂಕು ನಿವಾರಕ ಸಿಂಪಡಣೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p><strong>ಕೋವಿಡ್ ಅಂಕಿ–ಅಂಶ</strong></p>.<p>ಜಿಲ್ಲೆಯಲ್ಲಿ ಒಟ್ಟು: 3,380</p>.<p>ಸಕ್ರಿಯ ಪ್ರಕರಣ: 1,356</p>.<p>ಏರಿಕೆ: 26</p>.<p>ಗುಣಮುಖ: 1,986</p>.<p>ಏರಿಕೆ: 82</p>.<p>ಸಾವು: 37</p>.<p>ಏರಿಕೆ: 01</p>.<p>ಜಿಲ್ಲೆಯಲ್ಲಿ ಒಟ್ಟು: 3,380</p>.<p>ಸಕ್ರಿಯ ಪ್ರಕರಣ: 1,356</p>.<p>ಏರಿಕೆ: 26</p>.<p>ಗುಣಮುಖ: 1,986</p>.<p>ಏರಿಕೆ: 82</p>.<p>ಸಾವು: 37</p>.<p>ಏರಿಕೆ: 01</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀರಂಗಪಟ್ಟಣ ತಾಲ್ಲೂಕಿನ ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದು ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.</p>.<p>1,73,680ನೇ ರೋಗಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ, ತೀವ್ರ ಉಸಿರಾಟದ ಸಮಸ್ಯೆ ಹಾಗೂ ಜ್ವರದಿಂದ ಬಳಲುತ್ತಿದ್ದ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಅವರನ್ನು ಕೋವಿಡ್ ಕಾರ್ಯಸೂಚಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು.</p>.<p>ಸೋಮವಾರ 26 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 380ಕ್ಕೆ ಏರಿಕೆಯಾಗಿದೆ. ಮಂಡ್ಯ ತಾಲ್ಲೂಕಿನಲ್ಲಿ ಒಬ್ಬರು, ಮದ್ದೂರು 3, ಮಳವಳ್ಳಿ 2, ಶ್ರೀರಂಗಪಟ್ಟಣ 1, ಕೆ.ಆರ್.ಪೇಟೆ 4, ನಾಗಮಂಗಲ ತಾಲ್ಲೂಕಿನ 7 ಮಂದಿಗೆ ಕೋವಿಡ್ ಪತ್ತೆಯಾಗಿದೆ.</p>.<p>ಕೋವಿಡ್ನಿಂದ ಗುಣಮುಖರಾದ 82 ಮಂದಿಯನ್ನು ಸೋಮವಾರ ಬಿಡುಗಡೆ ಮಾಡಲಾಯಿತು. ಮಂಡ್ಯ 40, ಮದ್ದೂರು 5, ಶ್ರೀರಂಗಪಟ್ಟಣ 20, ಕೆ.ಆರ್.ಪೇಟೆ 12, ನಾಗಮಂಗಲ ತಾಲ್ಲೂಕಿನ 4 ಮಂದಿಯನ್ನು ಬಿಡುಗಡೆ ಮಾಡಲಾಯಿತು. ಒಟ್ಟು ರೋಗಿಗಳಲ್ಲಿ ಇಲ್ಲಿಯವರೆಗೂ 1,986 ಮಂದಿ ಗುಣಮುಖರಾಗಿದ್ದಾರೆ. 1,356 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಅಸಮಾಧಾನ: ಕೋವಿಡ್ ರೋಗಿಗಳು ಪತ್ತೆಯಾದ ಮನೆ ಹಾಗೂ ಬೀದಿಗಳಲ್ಲಿ ಸೋಂಕುನಿವಾರಕ ಸಿಂಪಡಣೆ ಮಾಡುತ್ತಿಲ್ಲ ಎಂದು ವಿವಿಧೆಡೆ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾವೇರಿ ನಗರ, ಕಣ್ವ ಮಾರ್ಗದಲ್ಲಿ ಪತ್ತೆಯಾದ ಪತ್ತೆಯಾದ ರೋಗಿಯ ಮನೆ, ಬೀದಿಯಲ್ಲಿ ಸೋಂಕು ನಿವಾರಕ ಸಿಂಪಡಣೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p>.<p><strong>ಕೋವಿಡ್ ಅಂಕಿ–ಅಂಶ</strong></p>.<p>ಜಿಲ್ಲೆಯಲ್ಲಿ ಒಟ್ಟು: 3,380</p>.<p>ಸಕ್ರಿಯ ಪ್ರಕರಣ: 1,356</p>.<p>ಏರಿಕೆ: 26</p>.<p>ಗುಣಮುಖ: 1,986</p>.<p>ಏರಿಕೆ: 82</p>.<p>ಸಾವು: 37</p>.<p>ಏರಿಕೆ: 01</p>.<p>ಜಿಲ್ಲೆಯಲ್ಲಿ ಒಟ್ಟು: 3,380</p>.<p>ಸಕ್ರಿಯ ಪ್ರಕರಣ: 1,356</p>.<p>ಏರಿಕೆ: 26</p>.<p>ಗುಣಮುಖ: 1,986</p>.<p>ಏರಿಕೆ: 82</p>.<p>ಸಾವು: 37</p>.<p>ಏರಿಕೆ: 01</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>