ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಶಾನ ರಸ್ತೆ ಜಲಾವೃತ: ನೀರಿನಲ್ಲಿ ಶವ ಹೊತ್ತೊಯ್ದು ಸಂಸ್ಕಾರ

Last Updated 8 ಆಗಸ್ಟ್ 2022, 13:30 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ತಾಲ್ಲೂಕಿನ ಮಹದೇವಪುರ ಗ್ರಾಮದ ಸ್ಮಶಾನ ರಸ್ತೆ ಕಾವೇರಿ ನದಿಯ ಪ್ರವಾಹದಲ್ಲಿ ಮುಳುಗಿದ್ದು, ಮಹಿಳೆಯೊಬ್ಬರ ಶವವನ್ನು ಎದೆ ಮಟ್ಟದ ನೀರಿನಲ್ಲೇ ಹೊತ್ತೊಯ್ದು ಸಂಸ್ಕಾರ ಮಾಡಿದ ಪ್ರಸಂಗ ಭಾನುವಾರ ನಡೆದಿದೆ.

ಗ್ರಾಮದ ಸುಲೋಚನಾ ಎಂಬುವವರು ಅನಾರೋಗ್ಯದಿಂದ ಮೃತಪಟ್ಟಿದ್ದು, ಅವರ ಬಂಧುಗಳು ಎದೆ ಮಟ್ಟದ ನೀರಿನಲ್ಲೇ ಶವ ಸಾಗಿಸಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಗ್ರಾಮದ ನಾಯಕ ಜನಾಂಗದವರು ನದಿ ತೀರದಲ್ಲಿ ಶವ ಸಂಸ್ಕಾರ ಮಾಡುವ ವಾಡಿಕೆ ಇದೆ. ಸ್ಮಶಾನದ ಸಂಪರ್ಕ ಮಾರ್ಗ ಜಲಾವೃತವಾಗಿದ್ದು ರಭಸವಾಗಿ ನೀರು ಹರಿಯುತ್ತಿದೆ. ಅಪಾಯವನ್ನೂ ಲೆಕ್ಕಿಸದೆ ನೀರಿನಲ್ಲಿ ಶವವನ್ನು ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಗ್ರಾಮದ ಬೋರೆಯಲ್ಲಿ ನಾಯಕ ಜನಾಂಗಕ್ಕೆ ಸ್ಮಶಾನ ಜಾಗ ಮೀಸಲಿಡಲಾಗಿದೆ. ಆದರೆ ಈ ಜಾಗ ಜನವಸತಿ ಸ್ಥಳದಿಂದ ದೂರದಲ್ಲಿದೆ ಎಂಬ ಕಾರಣಕ್ಕೆ ಅಲ್ಲಿ ಶವ ಸಂಸ್ಕಾರ ಮಾಡುತ್ತಿಲ್ಲ. ತಲೆಮಾರುಗಳಿಂದಲೂ ಹೊಳೆ ತೀರದಲ್ಲೇ ಶವ ಸಂಸ್ಕಾರ ಮಾಡುತ್ತಿದ್ದಾರೆ.

ಶವ ಸಂಸ್ಕಾರ ಮಾಡುವ ಜಾಗದಲ್ಲಿ ನೀರು ಇಲ್ಲ, ಆ ಜಾಗಕ್ಕೆ ತೆರಳುವ ಮಾರ್ಗವಷ್ಟೇ ಜಲಾವೃತವಾಗಿತ್ತು. ಹಾಗಾಗಿ ಸ್ವಲ್ಪ ದೂರ ನೀರಿನಲ್ಲಿ ತೆರಳಿ ಶವಸಂಸ್ಕಾರ ಮಾಡಲಾಯಿತು’ ಎಂದು ಗ್ರಾಮಸ್ಥರು ತಿಳಿಸಿದರು.

‘ನದಿ ತೀರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ, ಪ್ರವಾಹದ ನೀರಿನಲ್ಲಿ ಶವ ಸಾಗಿಸಿದ ಬಗ್ಗೆ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆಯಲಾಗುವುದು’ ಎಂದು ಎಎಸ್ಪಿ ವೇಣುಗೋಪಾಲ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT