ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಿಜೆಪಿಯವರು ಅಧಿಕಾರದಿಂದ ಕೆಳಗಿಳಿದು 4 ತಿಂಗಳಾಗಿದೆ, ಅವರು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ? 25 ಜನರು ಸಂಸದರು ಇದ್ದರೂ ಕಾವೇರಿ ಸಮಸ್ಯೆಯ ಬಗ್ಗೆ ಒಂದು ದಿನವೂ ಮಾತನಾಡಿಲ್ಲ. ಕೆಆರ್ಎಸ್ ಜಲಾಶಯದ ವೀಕ್ಷಣೆ ನೆಪದಲ್ಲಿ ಪ್ರದರ್ಶನ ಮಾಡಲು ಬಂದಿದ್ದಾರೆ’ ಎಂದು ಆರೋಪಿಸಿದರು.