ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಎಚ್.ಡಿ.ದೇವೇಗೌಡರ ನೇತೃತ್ವ, ಪ್ರಧಾನಿ ನರೇಂದ್ರ ಮೋದಿ ಅವರ ಸಹಕಾರದೊಂದಿಗೆ ಕುಮಾರಣ್ಣನನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸುತ್ತೇವೆ. ಮಂಡ್ಯಕ್ಕೆ ಕುಮಾರಸ್ವಾಮಿ ಅವರೇ ಬರಬೇಕು ಎಂದು ನಿರ್ಣಯ ಕೈಗೊಂಡಿದ್ದೆವು. ಕಾರ್ಯಕರ್ತರ ಒತ್ತಾಯವೂ ಅದೇ ಆಗಿತ್ತು. ನಮ್ಮ ಮನವಿಗೆ ಸ್ಪಂದಿಸಿರುವ ಕುಮಾರಣ್ಣ ಸ್ಪರ್ಧೆ ಮಾಡಲು ಒಪ್ಪಿದ್ದಾರೆ’ ಎಂದರು.