<p><strong>ನಾಗಮಂಗಲ: ಗು</strong>ರು ಪರಂಪರೆಯಿಂದ ಸಂಸ್ಕೃತಿ ಉಳಿದು ಸಂಸ್ಕಾರ ಬೆಳೆಯುತ್ತದೆ ಎಂದು ಗಾಯಕಿ ಅರ್ಚನಾ ಉಡುಪ ಹೇಳಿದರು.</p>.<p>ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ವತಿಯಿಂದ ಶುಕ್ರವಾರ ನಡೆದ 28ನೇ ರಾಜ್ಯ ಮಟ್ಟದ ಚುಂಚಾದ್ರಿ ಕಲೋತ್ಸವವದಲ್ಲಿ ಅವರು ಮಾತನಾಡಿದರು.</p>.<p>‘ಆದಿಚುಂಚನಗಿರಿಯ ಆಧ್ಯಾತ್ಮಿಕ ವಾತಾವರಣ ಮತ್ತು ಈ ಪವಿತ್ರ ಮಣ್ಣಿಗೆ ವಿಶೇಷವಾದ ದೈವಿಕ ಶಕ್ತಿ ಇದ್ದು, ಇಲ್ಲಿ ನಡೆದಾಡಿದರೆ ಗುರುಶಕ್ತಿಯ ಸಾಕ್ಷಾತ್ಕಾರವಾಗುತ್ತದೆ. ಇಲ್ಲಿ ಕಲಾ ಪ್ರದರ್ಶನಕ್ಕೆ ಆಗಮಿಸಿರುವ ಶ್ರೀಮಠದ ಸಾಂಸ್ಕೃತಿಕ ರಾಯಭಾರಿಗಳಾದ ನೀವು ಈ ಶ್ರೇಷ್ಠ ಗುರು ಪರಂಪರೆಯನ್ನು ಪಾಲಿಸಿದರೆ ಉತ್ತಮ ಭವಿಷ್ಯವಿದೆ’ ಎಂದರು.</p>.<p>ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ‘ಈ ಕ್ಷೇತ್ರಕ್ಕೆ 1800 ವರ್ಷಗಳ ಇತಿಹಾಸವಿದ್ದು, ಈ ಮಣ್ಣಿನ ಸ್ಪರ್ಶವು ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ. ಮನದ ಅಭೀಷ್ಟೆಗಾಗಿ ಅನೇಕ ಸಂತರು ತಪಗೈದ ಪುಣ್ಯಕ್ಷೇತ್ರ ಇದಾಗಿದೆ’ ಎಂದರು.</p>.<p>‘ಆಧುನಿಕ ತಂತ್ರಜ್ಞಾನ ಔನ್ನತ್ಯದ ಈ ಅವಧಿಯಲ್ಲಿ ಆಧ್ಯಾತ್ಮಿಕತೆಯೆಡೆಗೆ ಹೋಗುವುದು ಸುಲಭ ಸಾಧ್ಯವಲ್ಲ ಆದರೆ, ಸಂಸ್ಕೃತಿಯ ಭಾಗವಾಗಿರುವ ಸಂಗೀತ, ನೃತ್ಯ, ನಾಟಕ ದಂತಹ ವಿವಿಧ ಲಲಿತ ಕಲೆಗಳ ಆಸ್ವಾದನೆ ಮತ್ತು ಆರಾಧನೆಯಿಂದ ಕಲೆ ಮತ್ತು ಆಧ್ಯಾತ್ಮಿಕ ಸಿರಿಸಿಂಚನವನ್ನು ಅನುಭವಿಸಲು ಸಾಧ್ಯವಿದೆ’ ಎಂದು ಹೇಳಿದರು.</p>.<p>ಟ್ರಸ್ಟ್ ಆಡಳಿತಾಧಿಕಾರಿ ಎ.ಟಿ.ಶಿವರಾಮು ಮಾತನಾಡಿದರು. ಚರ್ಚಾಸ್ಪರ್ಧೆ, ಪ್ರಬಂಧ, ಕವನ, ಗಾಯನ, ನೃತ್ಯ ಸೇರಿದಂತೆ 12 ಸಹಪಠ್ಯ ಚಟುವಟಿಕೆ ಆಯೋಜಿಸಲಾಗಿತ್ತು. </p>.<p>ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಉಪ ಕುಲಪತಿ ಎಸ್.ಎನ್.ಶ್ರೀಧರ, ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಮೈಸೂರು ಶಾಖಾಮಠದ ಕಾರ್ಯದರ್ಶಿ ಸೋಮೇಶ್ವರನಾಥ ಸ್ವಾಮೀಜಿ, ಒಕ್ಕಲಿಗರ ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ಶಂಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ: ಗು</strong>ರು ಪರಂಪರೆಯಿಂದ ಸಂಸ್ಕೃತಿ ಉಳಿದು ಸಂಸ್ಕಾರ ಬೆಳೆಯುತ್ತದೆ ಎಂದು ಗಾಯಕಿ ಅರ್ಚನಾ ಉಡುಪ ಹೇಳಿದರು.</p>.<p>ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ವತಿಯಿಂದ ಶುಕ್ರವಾರ ನಡೆದ 28ನೇ ರಾಜ್ಯ ಮಟ್ಟದ ಚುಂಚಾದ್ರಿ ಕಲೋತ್ಸವವದಲ್ಲಿ ಅವರು ಮಾತನಾಡಿದರು.</p>.<p>‘ಆದಿಚುಂಚನಗಿರಿಯ ಆಧ್ಯಾತ್ಮಿಕ ವಾತಾವರಣ ಮತ್ತು ಈ ಪವಿತ್ರ ಮಣ್ಣಿಗೆ ವಿಶೇಷವಾದ ದೈವಿಕ ಶಕ್ತಿ ಇದ್ದು, ಇಲ್ಲಿ ನಡೆದಾಡಿದರೆ ಗುರುಶಕ್ತಿಯ ಸಾಕ್ಷಾತ್ಕಾರವಾಗುತ್ತದೆ. ಇಲ್ಲಿ ಕಲಾ ಪ್ರದರ್ಶನಕ್ಕೆ ಆಗಮಿಸಿರುವ ಶ್ರೀಮಠದ ಸಾಂಸ್ಕೃತಿಕ ರಾಯಭಾರಿಗಳಾದ ನೀವು ಈ ಶ್ರೇಷ್ಠ ಗುರು ಪರಂಪರೆಯನ್ನು ಪಾಲಿಸಿದರೆ ಉತ್ತಮ ಭವಿಷ್ಯವಿದೆ’ ಎಂದರು.</p>.<p>ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ‘ಈ ಕ್ಷೇತ್ರಕ್ಕೆ 1800 ವರ್ಷಗಳ ಇತಿಹಾಸವಿದ್ದು, ಈ ಮಣ್ಣಿನ ಸ್ಪರ್ಶವು ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ. ಮನದ ಅಭೀಷ್ಟೆಗಾಗಿ ಅನೇಕ ಸಂತರು ತಪಗೈದ ಪುಣ್ಯಕ್ಷೇತ್ರ ಇದಾಗಿದೆ’ ಎಂದರು.</p>.<p>‘ಆಧುನಿಕ ತಂತ್ರಜ್ಞಾನ ಔನ್ನತ್ಯದ ಈ ಅವಧಿಯಲ್ಲಿ ಆಧ್ಯಾತ್ಮಿಕತೆಯೆಡೆಗೆ ಹೋಗುವುದು ಸುಲಭ ಸಾಧ್ಯವಲ್ಲ ಆದರೆ, ಸಂಸ್ಕೃತಿಯ ಭಾಗವಾಗಿರುವ ಸಂಗೀತ, ನೃತ್ಯ, ನಾಟಕ ದಂತಹ ವಿವಿಧ ಲಲಿತ ಕಲೆಗಳ ಆಸ್ವಾದನೆ ಮತ್ತು ಆರಾಧನೆಯಿಂದ ಕಲೆ ಮತ್ತು ಆಧ್ಯಾತ್ಮಿಕ ಸಿರಿಸಿಂಚನವನ್ನು ಅನುಭವಿಸಲು ಸಾಧ್ಯವಿದೆ’ ಎಂದು ಹೇಳಿದರು.</p>.<p>ಟ್ರಸ್ಟ್ ಆಡಳಿತಾಧಿಕಾರಿ ಎ.ಟಿ.ಶಿವರಾಮು ಮಾತನಾಡಿದರು. ಚರ್ಚಾಸ್ಪರ್ಧೆ, ಪ್ರಬಂಧ, ಕವನ, ಗಾಯನ, ನೃತ್ಯ ಸೇರಿದಂತೆ 12 ಸಹಪಠ್ಯ ಚಟುವಟಿಕೆ ಆಯೋಜಿಸಲಾಗಿತ್ತು. </p>.<p>ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಉಪ ಕುಲಪತಿ ಎಸ್.ಎನ್.ಶ್ರೀಧರ, ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಮೈಸೂರು ಶಾಖಾಮಠದ ಕಾರ್ಯದರ್ಶಿ ಸೋಮೇಶ್ವರನಾಥ ಸ್ವಾಮೀಜಿ, ಒಕ್ಕಲಿಗರ ಮಹಿಳಾ ಸಂಘದ ಅಧ್ಯಕ್ಷೆ ಭಾರತಿ ಶಂಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>