<p>ಹಲಗೂರು: ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯದವರು ಬಸವ ಜಯಂತಿ ಆಚರಿಸಿದರು.</p>.<p>ಗ್ರಾಮದ ಪ್ರಮುಖ ವೃತ್ತದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಸವಣ್ಣ ಮತ್ತು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರಕ್ಕೆ ಗ್ರಾಮಸ್ಥರು ಪುಷ್ಪನಮನ ಸಲ್ಲಿಸಿದರು.</p>.<p>ಮುಖಂಡ ರವೀಶ್ ಮಾತನಾಡಿ, ‘ಬಸವಣ್ಣನವರು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ, ಸಮಾಜದಲ್ಲಿದ್ದ ಜಾತಿ ಪದ್ಧತಿಯನ್ನು ತೊಲಗಿಸಲು ಶ್ರಮಿಸಿದರು’ ಎಂದರು.</p>.<p>ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹೊರ ರೋಗಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಗ್ರಾಮದ ಮುಖಂಡರಾದ ಜಯಶಂಕರ್ (ಜಯಣ್ಣ), ಮಂಜು, ರಮೇಶ, ಪ್ರವೀಣ, ರಾಜಶೇಖರಪ್ಪ, ನಾಗರಾಜಪ್ಪ, ಕಿರಣ್, ಮಹೇಶ, ರಮೇಶ, ನಾಗೇಶ, ಆಶಾ ರವೀಶ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-40-802049517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಲಗೂರು: ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯದವರು ಬಸವ ಜಯಂತಿ ಆಚರಿಸಿದರು.</p>.<p>ಗ್ರಾಮದ ಪ್ರಮುಖ ವೃತ್ತದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಸವಣ್ಣ ಮತ್ತು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರಕ್ಕೆ ಗ್ರಾಮಸ್ಥರು ಪುಷ್ಪನಮನ ಸಲ್ಲಿಸಿದರು.</p>.<p>ಮುಖಂಡ ರವೀಶ್ ಮಾತನಾಡಿ, ‘ಬಸವಣ್ಣನವರು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ, ಸಮಾಜದಲ್ಲಿದ್ದ ಜಾತಿ ಪದ್ಧತಿಯನ್ನು ತೊಲಗಿಸಲು ಶ್ರಮಿಸಿದರು’ ಎಂದರು.</p>.<p>ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹೊರ ರೋಗಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಗ್ರಾಮದ ಮುಖಂಡರಾದ ಜಯಶಂಕರ್ (ಜಯಣ್ಣ), ಮಂಜು, ರಮೇಶ, ಪ್ರವೀಣ, ರಾಜಶೇಖರಪ್ಪ, ನಾಗರಾಜಪ್ಪ, ಕಿರಣ್, ಮಹೇಶ, ರಮೇಶ, ನಾಗೇಶ, ಆಶಾ ರವೀಶ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-40-802049517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>