ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಯುವಕನ ಕಟ್ಟಿ ಮೆರವಣಿಗೆ

ನಾಲ್ವರ ವಿರುದ್ಧ ದೂರು ದಾಖಲು
Last Updated 19 ಅಕ್ಟೋಬರ್ 2021, 18:13 IST
ಅಕ್ಷರ ಗಾತ್ರ

ಮಳವಳ್ಳಿ: ಹಸುವಿನ ಕಳವು ಆರೋಪ ಹೊರಿಸಿ ಪರಿಶಿಷ್ಟ ಸಮುದಾಯದ ಯುವಕನೊಬ್ಬನನ್ನು ಹಸುವಿಗೆ ಕಟ್ಟಿ ಹಲ್ಲೆ ಮಾಡಿ, ಮೆರವಣಿಗೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಮಂಗಳವಾರ ವೈರಲ್ ಆಗಿತ್ತು.

ತಾಲ್ಲೂಕಿನ ಹಣಕೊಳ ಗ್ರಾಮದ ಸುರೇಶ್ ವರ್ಧನ್ ಹಲ್ಲೆಗೊಳಗಾದ ಯುವಕ.ದುಗ್ಗನಹಳ್ಳಿಯ ರಾಜು, ಹಣಕೊಳ ಗ್ರಾಮದ ಸುಂದರಮ್ಮ, ಮಳವಳ್ಳಿಯ ಮಲ್ಲಯ್ಯ, ಗಿರೀಶ್‌ ವಿರುದ್ಧ ಗ್ರಾಮಾಂತರ ಪ್ರಕರಣ ದಾಖಲಾಗಿದೆ.

ತಾಲ್ಲೂಕಿನ ದುಗ್ಗನಹಳ್ಳಿಯಲ್ಲಿ ವಾರದ ಹಿಂದೆ ಘಟನೆ ನಡೆದಿದೆ. ನಂತರ ಗ್ರಾಮದ ಮುಖಂಡರು ಸೇರಿ ರಾಜಿ ಸಂಧಾನ ಮಾಡಿದ್ದರು ಎನ್ನಲಾಗಿದೆ. ಆದರೆ, ಸೋಮವಾರ ವಿಡಿಯೊ ವೈರಲ್ ಆಗಿದ್ದು, ಹಲ್ಲೆಗೊಳಗಾದ ಯುವಕ ತನ್ನ ಸಮುದಾಯದ ಮುಖಂಡರೊಂದಿಗೆ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT