<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ನೀಲನಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ದುರಸ್ತಿ ಮಾಡಬೇಕಾದ ಕಟ್ಟಡಕ್ಕೆ ಬಣ್ಣ ಬಳಿದು ಹುಳುಕು ಮುಚ್ಚಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಶಾಲಾ ಕಟ್ಟಡದ ಮೇಲ್ಭಾಗದ ಗೋಡೆಯ ಇಟ್ಟಿಗೆಗಳು ಕುಸಿದು ಬೀಳುತ್ತಿವೆ. ಹೆಂಚುಗಳು ಉದುರುತ್ತಿವೆ. ಕಿಟಕಿ ಮತ್ತು ಬಾಗಿಲುಗಳು ಗೆದ್ದಿಲು ಹಿಡಿದಿದ್ದು, ಬೀಳುವ ಸ್ಥಿತಿಯಲ್ಲಿವೆ. ಮಕ್ಕಳ ಮೇಲೆ ಹೆಂಚು, ಇಟ್ಟಿಗೆ ಬಿದ್ದಿರುವ ಉದಾಹರಣೆಯೂ ಉಂಟು.</p>.<p>ಶಿಥಿಗೊಂಡಿರುವ ಶಾಲಾ ಕಟ್ಟಡವನ್ನು ದುರಸ್ತಿ ಮಾಡಿಸುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ ಯಾರೂ ಇತ್ತ ಗಮನ ಹರಿಸುತ್ತಿಲ್ಲ. ಶಿಥಿಲಗೊಂಡಿರುವ ಕಟ್ಟಡಕ್ಕೆ ಬಣ್ಣ ಬಳಿಯಲಾಗುತ್ತಿದೆ. ಸರ್ಕಾರದ ಹಣ ಪೋಲಾಗುತ್ತಿದೆ. ಈ ಅವೈಜ್ಞಾನಿಕ ಕ್ರಮವನ್ನು ಶಾಲೆಯ ಶಿಕ್ಷಕರು ಏಕೆ ಪ್ರಶ್ನಿಸಿಲ್ಲ? ಎಂದು ಗ್ರಾಮದ ಮುಖಂಡ ಮಂಜುನಾಥ್ ಪ್ರಶ್ನಿಸಿದ್ದಾರೆ.</p>.<p>‘ನೀಲನಕೊಪ್ಪಲು ಸರ್ಕಾರಿ ಶಾಲೆಯ ಕಟ್ಟಡಕ್ಕೆ ಇತ್ತೀಚೆಗೆ ಯಾರೋ ಬಂದು ಬಣ್ಣ ಬಳಿದು ಹೋದರು. ಅವರ ಹೆಸರು ಗೊತ್ತಿಲ್ಲ. ಯಾವ ಬಾಬ್ತಿನ ಅನುದಾನದಲ್ಲಿ ಬಣ್ಣ ಬಳಿದಿದ್ದಾರೆ ಎಂಬುದೂ ತಿಳಿದಿಲ್ಲ. ನಮಗೆ ಅವರು ಹೇಳಲೂ ಇಲ್ಲ; ನಾವು ಕೇಳಲೂ ಇಲ್ಲ. ಗೋಡೆ, ಕಿಟಕಿ, ಬಾಗಿಲುಗಳು ಶಿಥಿಲವಾಗಿದ್ದು ದುರಸ್ತಿ ಮಾಡಿಸುವ ಬದಲು ಬಣ್ಣ ಬಳಿದು ಹೋಗಿದ್ದಾರೆ. ಈ ಬಗ್ಗೆ ಊರಿನವರನ್ನೇ ಕೇಳಿ’ ಎಂದು ಶಾಲೆಯ ಮುಖ್ಯ ಶಿಕ್ಷಕಿ ಯಾಸ್ಮಿನ್ ತಾಜ್ ಹೇಳುತ್ತಾರೆ.</p>.<p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಅನಂತರಾಜು, ‘ಶಿಥಿಲಗೊಂಡಿರುವ ಶಾಲೆಯ ಕಟ್ಟಡವನ್ನು ದುರಸ್ತಿ ಮಾಡದೆ ಬಣ್ಣ ಬಳಿದು ಹುಳುಕು ಮುಚ್ಚುವುದು ಸರಿಯಲ್ಲ. ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕಿಯಿಂದ ಮಾಹಿತಿ ಪಡೆಯುತ್ತೇನೆ. ಲೋಪ ನಡೆದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ನೀಲನಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ದುರಸ್ತಿ ಮಾಡಬೇಕಾದ ಕಟ್ಟಡಕ್ಕೆ ಬಣ್ಣ ಬಳಿದು ಹುಳುಕು ಮುಚ್ಚಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.</p>.<p>ಶಾಲಾ ಕಟ್ಟಡದ ಮೇಲ್ಭಾಗದ ಗೋಡೆಯ ಇಟ್ಟಿಗೆಗಳು ಕುಸಿದು ಬೀಳುತ್ತಿವೆ. ಹೆಂಚುಗಳು ಉದುರುತ್ತಿವೆ. ಕಿಟಕಿ ಮತ್ತು ಬಾಗಿಲುಗಳು ಗೆದ್ದಿಲು ಹಿಡಿದಿದ್ದು, ಬೀಳುವ ಸ್ಥಿತಿಯಲ್ಲಿವೆ. ಮಕ್ಕಳ ಮೇಲೆ ಹೆಂಚು, ಇಟ್ಟಿಗೆ ಬಿದ್ದಿರುವ ಉದಾಹರಣೆಯೂ ಉಂಟು.</p>.<p>ಶಿಥಿಗೊಂಡಿರುವ ಶಾಲಾ ಕಟ್ಟಡವನ್ನು ದುರಸ್ತಿ ಮಾಡಿಸುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ ಯಾರೂ ಇತ್ತ ಗಮನ ಹರಿಸುತ್ತಿಲ್ಲ. ಶಿಥಿಲಗೊಂಡಿರುವ ಕಟ್ಟಡಕ್ಕೆ ಬಣ್ಣ ಬಳಿಯಲಾಗುತ್ತಿದೆ. ಸರ್ಕಾರದ ಹಣ ಪೋಲಾಗುತ್ತಿದೆ. ಈ ಅವೈಜ್ಞಾನಿಕ ಕ್ರಮವನ್ನು ಶಾಲೆಯ ಶಿಕ್ಷಕರು ಏಕೆ ಪ್ರಶ್ನಿಸಿಲ್ಲ? ಎಂದು ಗ್ರಾಮದ ಮುಖಂಡ ಮಂಜುನಾಥ್ ಪ್ರಶ್ನಿಸಿದ್ದಾರೆ.</p>.<p>‘ನೀಲನಕೊಪ್ಪಲು ಸರ್ಕಾರಿ ಶಾಲೆಯ ಕಟ್ಟಡಕ್ಕೆ ಇತ್ತೀಚೆಗೆ ಯಾರೋ ಬಂದು ಬಣ್ಣ ಬಳಿದು ಹೋದರು. ಅವರ ಹೆಸರು ಗೊತ್ತಿಲ್ಲ. ಯಾವ ಬಾಬ್ತಿನ ಅನುದಾನದಲ್ಲಿ ಬಣ್ಣ ಬಳಿದಿದ್ದಾರೆ ಎಂಬುದೂ ತಿಳಿದಿಲ್ಲ. ನಮಗೆ ಅವರು ಹೇಳಲೂ ಇಲ್ಲ; ನಾವು ಕೇಳಲೂ ಇಲ್ಲ. ಗೋಡೆ, ಕಿಟಕಿ, ಬಾಗಿಲುಗಳು ಶಿಥಿಲವಾಗಿದ್ದು ದುರಸ್ತಿ ಮಾಡಿಸುವ ಬದಲು ಬಣ್ಣ ಬಳಿದು ಹೋಗಿದ್ದಾರೆ. ಈ ಬಗ್ಗೆ ಊರಿನವರನ್ನೇ ಕೇಳಿ’ ಎಂದು ಶಾಲೆಯ ಮುಖ್ಯ ಶಿಕ್ಷಕಿ ಯಾಸ್ಮಿನ್ ತಾಜ್ ಹೇಳುತ್ತಾರೆ.</p>.<p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಅನಂತರಾಜು, ‘ಶಿಥಿಲಗೊಂಡಿರುವ ಶಾಲೆಯ ಕಟ್ಟಡವನ್ನು ದುರಸ್ತಿ ಮಾಡದೆ ಬಣ್ಣ ಬಳಿದು ಹುಳುಕು ಮುಚ್ಚುವುದು ಸರಿಯಲ್ಲ. ಈ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕಿಯಿಂದ ಮಾಹಿತಿ ಪಡೆಯುತ್ತೇನೆ. ಲೋಪ ನಡೆದಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>