<p><strong>ಮಂಡ್ಯ:</strong> ಎಸ್.ಸಿ, ಎಸ್.ಟಿ. ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಹಣ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು. </p>.<p>ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ ಮಾಡಿದ್ದು, ಇದರ ಆರ್ಥಿಕ ಅಶಿಸ್ತಿನ ನೈತಿಕ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಆಗ್ರಹಿಸಿದರು.</p>.<p>‘ಪ್ರಸಕ್ತ ಸಾಲಿನ ರಾಜ್ಯ ಬಜೆಟ್ನಲ್ಲಿ ₹39,121,46 ಕೋಟಿ ಅನುದಾನ ಬಳಕೆಗೆ ಕ್ರಿಯಾ ಯೋಜನೆಗೆ 4 ತಿಂಗಳು ಕಳೆದರೂ ಎಸ್ಸಿ, ಎಸ್ಟಿ ರಾಜ್ಯ ಅಭಿವೃದ್ಧಿ ಪರಿಷತ್ ಸಭೆ ಕರೆದು ಅನುಮೋದಿಸದೆ ಕಳೆದ ಶುಕ್ರವಾರ ಸಭೆ ನಡೆಸಿ ಗ್ಯಾರಂಟಿ ಯೋಜನೆಗಳಿಗೆ ₹14.282 ಕೋಟಿ ವರ್ಗಾಯಿಸಲು ತೀರ್ಮಾನಿಸಿರುವ ಮುಖ್ಯಮಂತ್ರಿಯ ನಡೆ ಪರಿಶಿಷ್ಟ ವಿರೋಧಿ ಧೋರಣೆ’ ಎಂದು ಆಕ್ರೋಶ ವ್ಯಕ್ತಡಿಸಿದರು.</p>.<p>‘ಪರಿಶಿಷ್ಟ ವಿರೋಧಿ ಧೋರಣೆಯ ಅನ್ಯಾಯವನ್ನು ತಡೆಯಲಾಗದ ರಾಜ್ಯ ಆಡಳಿತ ಪಕ್ಷದ ಪರಿಶಿಷ್ಟ ಮಂತ್ರಿ, ಶಾಸಕರು ಮತ್ತು ವಿರೋಧ ಪಕ್ಷದಲ್ಲಿನ ಪರಿಶಿಷ್ಟ ಶಾಸಕರುಗಳೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಎಸ್.ಸಿ, ಎಸ್.ಟಿ/ ಟಿ.ಎಸ್.ಪಿ ಅನುದಾನದ ₹24,282 ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲ್ಪಟ್ಟ ಅನುದಾನವನ್ನು ಮತ್ತು ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ₹187 ಕೋಟಿ ಹಾಗೂ ಕಳೆದ ಹತ್ತು ವರ್ಷಗಳಿಂದಲೂ ಸರ್ಕಾರವೇ ವಾಪಸ್ಸು ಪಡೆದುಕೊಂಡಿರುವ ₹80 ಸಾವಿರ ಕೋಟಿ ಸೇರಿ ಒಟ್ಟು ₹105,469 ಕೋಟಿ ಅನುದಾನವನ್ನು ಮತ್ತೆ ಸೇರಿಸಿ ರಾಜ್ಯ ಪರಿಶಿಷ್ಟ ಸಮುದಾಯದ ಕುಟುಂಬಗಳಿಗೆ ತಲಾ ₹25 ಲಕ್ಷದಂತೆ ರಾಜ್ಯಸರ್ಕಾರ ಹಂಚಿಕೆ ಮಾಡಬೇಕು ಎಂದು ಆಗ್ರಹ ಪಡಿಸಿದರು.</p>.<p>‘ಎಸ್.ಸಿ, ಎಸ್.ಟಿ./ಟಿ.ಎ.ಎಸ್.ಪಿ ಅನುದಾನದ ಸದ್ಭಳಕೆ ಮಾಡದೆ, ದುರ್ಬಳಕೆ ಮಾಡಿರುವ ಅಧಿಕಾರಿ ಮತ್ತು ಜನಪ್ರತಿನಿಧಿಗಳ ಮೇಲೆ ರಾಜ್ಯ ಪರಿಶಿಷ್ಟ ಜಾತಿ, ಪಂಗಡಗಳ ಉಪಯೋಜನಾ ಕಾಯ್ದೆ(2013) ಅನ್ವಯ ಕ್ರಿಮಿನಲ್ ಹಾಗೂ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ ಮಾಡಿಸಿ, ಎಸ್ಐಟಿ ತನಿಖೆ ನಾಟಕವಾಡುತ್ತಿರುವ ರಾಜ್ಯ ಸರ್ಕಾರವೇ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ಬಿ.ಆನಂದ್, ಸುರೇಶ್ ಮರಳಗಾಲ, ಮರಂಕಯ್ಯ, ಅನಿಲ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಎಸ್.ಸಿ, ಎಸ್.ಟಿ. ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಹಣ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು. </p>.<p>ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ ಮಾಡಿದ್ದು, ಇದರ ಆರ್ಥಿಕ ಅಶಿಸ್ತಿನ ನೈತಿಕ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಆಗ್ರಹಿಸಿದರು.</p>.<p>‘ಪ್ರಸಕ್ತ ಸಾಲಿನ ರಾಜ್ಯ ಬಜೆಟ್ನಲ್ಲಿ ₹39,121,46 ಕೋಟಿ ಅನುದಾನ ಬಳಕೆಗೆ ಕ್ರಿಯಾ ಯೋಜನೆಗೆ 4 ತಿಂಗಳು ಕಳೆದರೂ ಎಸ್ಸಿ, ಎಸ್ಟಿ ರಾಜ್ಯ ಅಭಿವೃದ್ಧಿ ಪರಿಷತ್ ಸಭೆ ಕರೆದು ಅನುಮೋದಿಸದೆ ಕಳೆದ ಶುಕ್ರವಾರ ಸಭೆ ನಡೆಸಿ ಗ್ಯಾರಂಟಿ ಯೋಜನೆಗಳಿಗೆ ₹14.282 ಕೋಟಿ ವರ್ಗಾಯಿಸಲು ತೀರ್ಮಾನಿಸಿರುವ ಮುಖ್ಯಮಂತ್ರಿಯ ನಡೆ ಪರಿಶಿಷ್ಟ ವಿರೋಧಿ ಧೋರಣೆ’ ಎಂದು ಆಕ್ರೋಶ ವ್ಯಕ್ತಡಿಸಿದರು.</p>.<p>‘ಪರಿಶಿಷ್ಟ ವಿರೋಧಿ ಧೋರಣೆಯ ಅನ್ಯಾಯವನ್ನು ತಡೆಯಲಾಗದ ರಾಜ್ಯ ಆಡಳಿತ ಪಕ್ಷದ ಪರಿಶಿಷ್ಟ ಮಂತ್ರಿ, ಶಾಸಕರು ಮತ್ತು ವಿರೋಧ ಪಕ್ಷದಲ್ಲಿನ ಪರಿಶಿಷ್ಟ ಶಾಸಕರುಗಳೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಎಸ್.ಸಿ, ಎಸ್.ಟಿ/ ಟಿ.ಎಸ್.ಪಿ ಅನುದಾನದ ₹24,282 ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲ್ಪಟ್ಟ ಅನುದಾನವನ್ನು ಮತ್ತು ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ₹187 ಕೋಟಿ ಹಾಗೂ ಕಳೆದ ಹತ್ತು ವರ್ಷಗಳಿಂದಲೂ ಸರ್ಕಾರವೇ ವಾಪಸ್ಸು ಪಡೆದುಕೊಂಡಿರುವ ₹80 ಸಾವಿರ ಕೋಟಿ ಸೇರಿ ಒಟ್ಟು ₹105,469 ಕೋಟಿ ಅನುದಾನವನ್ನು ಮತ್ತೆ ಸೇರಿಸಿ ರಾಜ್ಯ ಪರಿಶಿಷ್ಟ ಸಮುದಾಯದ ಕುಟುಂಬಗಳಿಗೆ ತಲಾ ₹25 ಲಕ್ಷದಂತೆ ರಾಜ್ಯಸರ್ಕಾರ ಹಂಚಿಕೆ ಮಾಡಬೇಕು ಎಂದು ಆಗ್ರಹ ಪಡಿಸಿದರು.</p>.<p>‘ಎಸ್.ಸಿ, ಎಸ್.ಟಿ./ಟಿ.ಎ.ಎಸ್.ಪಿ ಅನುದಾನದ ಸದ್ಭಳಕೆ ಮಾಡದೆ, ದುರ್ಬಳಕೆ ಮಾಡಿರುವ ಅಧಿಕಾರಿ ಮತ್ತು ಜನಪ್ರತಿನಿಧಿಗಳ ಮೇಲೆ ರಾಜ್ಯ ಪರಿಶಿಷ್ಟ ಜಾತಿ, ಪಂಗಡಗಳ ಉಪಯೋಜನಾ ಕಾಯ್ದೆ(2013) ಅನ್ವಯ ಕ್ರಿಮಿನಲ್ ಹಾಗೂ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ ಮಾಡಿಸಿ, ಎಸ್ಐಟಿ ತನಿಖೆ ನಾಟಕವಾಡುತ್ತಿರುವ ರಾಜ್ಯ ಸರ್ಕಾರವೇ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಮುಖಂಡರಾದ ಬಿ.ಆನಂದ್, ಸುರೇಶ್ ಮರಳಗಾಲ, ಮರಂಕಯ್ಯ, ಅನಿಲ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>