ಮಹೇಂದ್ರ ಹೆಸರಿನ ಆನೆ ಚಾಮುಂಡೇಶ್ವರಿ ದೇವಿಯ ಉತ್ಸವವನ್ನು ಹೊತ್ತು ಸಾಗಿತು. ಕಾವೇರಿ ಮತ್ತು ವಿಜಯ ಆನೆಗಳು ಕುಮ್ಕಿ
ಆನೆಗಳಾಗಿ ಹೆಜ್ಜೆ ಹಾಕಿದವು . ಕಿರಂಗೂರು, ಬಾಬುರಾಯನಕೊಪ್ಪಲು, ಪಟ್ಟಣದ ಕುವೆಂಪು ವೃತ್ತ, ಪುರಸಭೆ ಸರ್ಕಲ್ ಮೂಲಕ ಹಾದು ಉತ್ಸವ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣ ತಲುಪಿತು. ಜಾನಪದ ಕಲಾ ತಂಡಗಳು , ವಿವಿಧ ಇಲಾಖೆಗಳ ಸ್ತಬ್ದ ಚಿತ್ರಗಳು ಮೆರವಣಿಗೆಗೆ ಮೆರಗು ನೀಡಿದವು. ದಾರಿಯುದ್ದಕ್ಕೂ ಸಹಸ್ರಾರು ಮಂದಿ ಉತ್ಸವವನ್ನು ಕಣ್ತುಂಬಿಕೊಂಡರು .