ನಗರದ ವಿವಿಧ ಬಡಾವಣೆ, ಸರ್ಕಲ್, ರಸ್ತೆಗಳಿಗೆ ಭೇಟಿ ನೀಡಿ ಸ್ವಚ್ಛತೆಯ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಹೊಸಹಳ್ಳಿ ವೃತ್ತದಲ್ಲಿ ನಾಲ್ಕು ರಸ್ತೆಗಳ ಸಮೀಪ ಉದ್ಯಾನ ರೂಪಿಸಿ ಅಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಪ್ರತಿಷ್ಠಾಪಿಸುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಆ ಜಾಗದಲ್ಲಿ ಸುಂದರ ಪರಿಸರ ರೂಪಿಸುವ ಕುರಿತು ಮಾತುಕತೆ ನಡೆಸಿದರು.