‘ರಾಜ್ಯದಲ್ಲಿ ಮಾರ್ಚ್ 27ರಂದು ಬೆಳಿಗ್ಗೆ 11.10ರಿಂದ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿದೆ. ಕೃಷಿ ಇಲಾಖೆ ಮಾರ್ಚ್ 28ರಂದು ಸಭೆಯ ದಿನಾಂಕ ನಿಗದಿ ಮಾಡಿದೆ. ಕೃಷಿ ಇಲಾಖೆ ತರಾತುರಿಯಲ್ಲಿ ನೇಮಕ ಪ್ರಕ್ರಿಯೆ ನಡೆಸಲು ಮುಂದಾಗಿದೆ. ಈ ನಡೆ ಅನುಮಾನ ಹುಟ್ಟಿಸಿದೆ. ಸಚಿವರು ಇಲಾಖೆಯ ಅಧಿಕಾರಿಗಳ ಮೂಲಕ ಕೆಲಸ ಮಾಡಿಸಲು ಮುಂದಾಗಿದ್ದಾರೆ’ ಎಂದು ಹೆಸರು ಹೇಳಲು ಇಚ್ಛಿಸದ ಶಿಕ್ಷಣ ತಜ್ಞರೊಬ್ಬರು ಆರೋಪಿಸಿದರು.