<p><strong>ಮಳವಳ್ಳಿ:</strong> ತಾಲ್ಲೂಕಿನ ಕೊಡಗಹಳ್ಳಿ ಬಳಿ ತೋಟದ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಕಾರ್ಮಿಕರ ಪೈಕಿ ಇಬ್ಬರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದು, ಒಬ್ಬರು ಅಸ್ವಸ್ಥಗೊಂಡಿದ್ದಾರೆ.</p>.<p>ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬೈರನಹಳ್ಳಿ ಗ್ರಾಮದ ಶ್ರೀನಿವಾಸ್ (35), ಬೋಡಪ್ಪ (58) ಮೃತರು. ಒಡಿಶಾದ ರಾಜು ಅಸ್ವಸ್ಥಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಮುಡುಕುತೊರೆ ರಸ್ತೆಯಲ್ಲಿ ಕೋಲಾರದ ರಾಜೇಶ್ ಎಂಬುವರು ತೋಟ ಮಾಡಿಕೊಂಡಿದ್ದು, ಇಲ್ಲಿ ಮಾಲೂರು, ಒಡಿಶಾ ಮತ್ತು ಕೋಲ್ಕತ್ತದ 10 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ ಅಡುಗೆ ಮಾಡಿ ಹತ್ತು ಮಂದಿಯೂ ಊಟ ತಿಂದಿದ್ದು, ಈ ಮೂವರೂ ಒಂದು ಕೊಠಡಿಯಲ್ಲಿ ಮಲಗಿದ್ದಾರೆ. ನಾಲ್ವರು ಮತ್ತೊಂದು ಕೊಠಡಿಯಲ್ಲಿ, ಮೂವರು ವರಾಂಡದಲ್ಲಿ ಮಲಗಿದ್ದಾರೆ.</p>.<p>ಬೆಳಿಗ್ಗೆ ಎಂದಿನಂತೆ ಕೆಲಸಕ್ಕೆ ಹೊರಡಲು ಏಳು ಮಂದಿ ಸಿದ್ಧವಾಗಿದ್ದಾರೆ. ಆದರೆ, ಈ ಮೂವರು ಎಚ್ಚರಗೊಳ್ಳದ ಕಾರಣ, ಕೊಠಡಿಗೆ ಹೋಗಿ ನೋಡಿದಾಗ ಇಬ್ಬರು ಮಲಗಿದ್ದ ಸ್ಥಿತಿಯಲ್ಲೇ ಅಸುನೀಗಿರುವುದು ಗೊತ್ತಾಗಿದೆ. ಕೂಡಲೇ, ಪೊಲೀಸರಿಗೆ ಹಾಗೂ ಜಮೀನು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಡಿವೈಎಸ್ಪಿ ಎಂ.ಜೆ.ಪೃಥ್ವಿ, ಸಿಪಿಐ ಧರ್ಮೇಂದ್ರ, ಪಿಎಸ್ಐ ಉಮಾವತಿ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು. ಶವಗಳನ್ನು ಮಂಡ್ಯ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ತಾಲ್ಲೂಕಿನ ಕೊಡಗಹಳ್ಳಿ ಬಳಿ ತೋಟದ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಕಾರ್ಮಿಕರ ಪೈಕಿ ಇಬ್ಬರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದು, ಒಬ್ಬರು ಅಸ್ವಸ್ಥಗೊಂಡಿದ್ದಾರೆ.</p>.<p>ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬೈರನಹಳ್ಳಿ ಗ್ರಾಮದ ಶ್ರೀನಿವಾಸ್ (35), ಬೋಡಪ್ಪ (58) ಮೃತರು. ಒಡಿಶಾದ ರಾಜು ಅಸ್ವಸ್ಥಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಮುಡುಕುತೊರೆ ರಸ್ತೆಯಲ್ಲಿ ಕೋಲಾರದ ರಾಜೇಶ್ ಎಂಬುವರು ತೋಟ ಮಾಡಿಕೊಂಡಿದ್ದು, ಇಲ್ಲಿ ಮಾಲೂರು, ಒಡಿಶಾ ಮತ್ತು ಕೋಲ್ಕತ್ತದ 10 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ ಅಡುಗೆ ಮಾಡಿ ಹತ್ತು ಮಂದಿಯೂ ಊಟ ತಿಂದಿದ್ದು, ಈ ಮೂವರೂ ಒಂದು ಕೊಠಡಿಯಲ್ಲಿ ಮಲಗಿದ್ದಾರೆ. ನಾಲ್ವರು ಮತ್ತೊಂದು ಕೊಠಡಿಯಲ್ಲಿ, ಮೂವರು ವರಾಂಡದಲ್ಲಿ ಮಲಗಿದ್ದಾರೆ.</p>.<p>ಬೆಳಿಗ್ಗೆ ಎಂದಿನಂತೆ ಕೆಲಸಕ್ಕೆ ಹೊರಡಲು ಏಳು ಮಂದಿ ಸಿದ್ಧವಾಗಿದ್ದಾರೆ. ಆದರೆ, ಈ ಮೂವರು ಎಚ್ಚರಗೊಳ್ಳದ ಕಾರಣ, ಕೊಠಡಿಗೆ ಹೋಗಿ ನೋಡಿದಾಗ ಇಬ್ಬರು ಮಲಗಿದ್ದ ಸ್ಥಿತಿಯಲ್ಲೇ ಅಸುನೀಗಿರುವುದು ಗೊತ್ತಾಗಿದೆ. ಕೂಡಲೇ, ಪೊಲೀಸರಿಗೆ ಹಾಗೂ ಜಮೀನು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಡಿವೈಎಸ್ಪಿ ಎಂ.ಜೆ.ಪೃಥ್ವಿ, ಸಿಪಿಐ ಧರ್ಮೇಂದ್ರ, ಪಿಎಸ್ಐ ಉಮಾವತಿ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು. ಶವಗಳನ್ನು ಮಂಡ್ಯ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>