ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತದಲ್ಲಿ ಸಾವು: ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ- ಪಾಂಡವಪುರದಲ್ಲಿ ಘಟನೆ

Published 2 ಸೆಪ್ಟೆಂಬರ್ 2023, 14:03 IST
Last Updated 2 ಸೆಪ್ಟೆಂಬರ್ 2023, 14:03 IST
ಅಕ್ಷರ ಗಾತ್ರ

ಪಾಂಡವಪುರ: ಅಪಘಾತದಿಂದ ಮಿದುಳು ನಿಷ್ಕ್ರಿಯಗೊಂಡು ಸಾವಿಗೀಡಾದ ಯುವಕನ ಅಂಗಾಂಗಗಳನ್ನು ಕುಟುಂಬದವರು ದಾನ ಮಾಡಿದ್ದಾರೆ.

ತಾಲ್ಲೂಕಿನ ಇಂಗಲಗುಪ್ಪೆ ಗ್ರಾಮದ ಅಶೋಕ್ ಅವರ ಪುತ್ರ ಪ್ರಜ್ವಲ್ (23) ಕಳೆದ 4 ದಿನಗಳ ಹಿಂದೆ ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಬಳಿ ಅಪಘಾತಕ್ಕೀಡಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು.

ಚಿಕಿತ್ಸೆ ನೀಡಿದ ವೈದ್ಯರು ಪ್ರಜ್ವಲ್ ಅವರ ಮಿದುಳು ನಿಷ್ಕ್ರಿಯವಾಗಿದ್ದು ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ಕುಟುಂಬದವರಿಗೆ ಮಾಹಿತಿ ನೀಡಿದರು. ಬಳಿಕ ಕುಟುಂಬದವರು  ಪ್ರಜ್ವಲ್ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದರು.

ಶುಕ್ರವಾರ ಮೃತನಾಗಿದ್ದ ಪ್ರಜ್ವಲ್‌ ಅಂತ್ಯಕ್ರಿಯೆಯು ಶನಿವಾರ ಸ್ವಗ್ರಾಮ ಇಂಗಲಗುಪ್ಪೆಯಲ್ಲಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT