ಪಾಂಡವಪುರ: ಹೇಮಾವತಿ ನಾಲೆಯಲ್ಲಿ ಈಜಲು ಹೋಗಿದ್ದ ಯುವಕ ಕೊಚ್ಚಿ ಹೋದ ಘಟನೆ ತಾಲ್ಲೂಕಿನ ಮೇಲುಕೋಟೆ ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಪಾಂಡವಪುರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಕೃಷ್ಣೇಗೌಡ ಅವರ ಪುತ್ರ ಶಶಾಂಕ್ ಗೌಡ (20) ಕೊಚ್ಚಿ ಹೋದ ಯುವಕ.
ಉಳಿಗೆರೆ ಬಳಿಯ ತಮ್ಮ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಗೆಳೆಯರ ಜೊತೆ ಹೇಮಾವತಿ ನಾಲೆಯಲ್ಲಿ ಈಜಲು ಹೋದಾಗ ಘಟನೆ ನಡೆದಿದೆ. ಆತನಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ಅಗ್ನಿಶಾಮಕ ದಳದಿಂದ ಶವದ ಹುಡುಕಾಟ ನಡೆಸಿದ್ದಾರೆ.