<p><strong>ಶ್ರೀರಂಗಪಟ್ಟಣ</strong>: ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.</p>.<p>ಗ್ರಾಮದ ದಿವಂಗತ ಮರಿದೇವೇಗೌಡ ಅವರ ಮಗ ಗೋವಿಂದರಾಜು (42) ಮೃತರು.</p>.<p>‘ಗೋವಿಂದರಾಜು ಬ್ಯಾಂಕ್ನಲ್ಲಿ ಪಡೆದಿದ್ದ ಸಾಲ ತೀರಿಸಲು ಜಮೀನು ಮಾರಾಟ ಮಾಡಿದ್ದರು. ಆದರೂ ವಿವಿಧ ಸಂಘ, ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಪಡೆದಿದ್ದ ₹3 ಲಕ್ಷಕ್ಕೂ ಹೆಚ್ಚು ಸಾಲ ಉಳಿದಿತ್ತು. ಸಾಲಗಾರರ ಕಿರುಕುಳ ಹೆಚ್ಚಾದ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಗೋವಿಂದರಾಜು ಅವರ ಪತ್ನಿ ನೇತ್ರಾವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p>ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರು ಗೋವಿಂದರಾಜು ಅವರ ಶವ ಇರಿಸಿದ್ದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗೋವಿಂದರಾಜು ಅವರ ಸಂಬಂಧಿಕರಿಂದ ಮಾಹಿತಿ ಪಡೆದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.</p>.<p>ಗ್ರಾಮದ ದಿವಂಗತ ಮರಿದೇವೇಗೌಡ ಅವರ ಮಗ ಗೋವಿಂದರಾಜು (42) ಮೃತರು.</p>.<p>‘ಗೋವಿಂದರಾಜು ಬ್ಯಾಂಕ್ನಲ್ಲಿ ಪಡೆದಿದ್ದ ಸಾಲ ತೀರಿಸಲು ಜಮೀನು ಮಾರಾಟ ಮಾಡಿದ್ದರು. ಆದರೂ ವಿವಿಧ ಸಂಘ, ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಪಡೆದಿದ್ದ ₹3 ಲಕ್ಷಕ್ಕೂ ಹೆಚ್ಚು ಸಾಲ ಉಳಿದಿತ್ತು. ಸಾಲಗಾರರ ಕಿರುಕುಳ ಹೆಚ್ಚಾದ ಕಾರಣ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಗೋವಿಂದರಾಜು ಅವರ ಪತ್ನಿ ನೇತ್ರಾವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p>ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರು ಗೋವಿಂದರಾಜು ಅವರ ಶವ ಇರಿಸಿದ್ದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗೋವಿಂದರಾಜು ಅವರ ಸಂಬಂಧಿಕರಿಂದ ಮಾಹಿತಿ ಪಡೆದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>