ದೇವಾಲಯಕ್ಕೆ ಬುಧವಾರ ಭೇಟಿ ನೀಡಿದ್ದ ಅವರು, ‘500 ವರ್ಷಗಳ ಇತಿಹಾಸ ಇರುವ ದೇವಾಲಯ ಸ್ಥಳಾಂತರಿಸಲು ಜಿಲ್ಲಾಡಳಿತ ತಾಲ್ಲೂಕು ಆಡಳಿತಕ್ಕೆ ಸೂಚನೆ ನೀಡಿದೆ. ದೇಗುಲ ಸ್ಥಳಾಂತರ ಮತ್ತು ಅಭಿವೃದ್ಧಿ ಸಂಬಂಧ ಸಮಿತಿ ರಚಿಸುವಂತೆ ತಹಶೀಲ್ದಾರ್ ಎಂ.ವಿ. ರೂಪಾ ಅವರು ನನಗೆ ತಿಳಿಸಿದ್ದಾರೆ. ಆ ಸಮಿತಿಯಲ್ಲಿ ನಾನೂ ಸೇರಿದಂತೆ ಕೃಷ್ಣಭಟ್, ಗಂಜಾಂ ಗೋವಿಂದರಾಜು, ಮೈಸೂರಿನ ಡಿ.ಟಿ. ಪ್ರಕಾಶ್, ಜಯಸ್ವಾಮಿ ಇತರರು ಇರುತ್ತೇವೆ. ದೇವಾಲಯ ಅಭಿವೃದ್ಧಿ ಸಮಿತಿ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ವ್ಯವಹರಿಸಲಾಗುತ್ತದೆ’ ಎಂದು ಹೇಳಿದರು.