ಶ್ರೀರಂಗಪಟ್ಟಣ: ಜಿಂಕೆ ಕೊಂಬು ಮತ್ತು ಎರಡು ಜೀವಂತ ಆಮೆಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ತಾಲ್ಲೂಕಿನ ಚನ್ನಹಳ್ಳಿ ಬೋರೆ ಗ್ರಾಮದ ಮಾದಪ್ಪ (38) ಬಂಧಿತ ವ್ಯಕ್ತಿ. ಮಾದಪ್ಪ ಮೈಸೂರು ಕಡೆ ತೆರಳುತ್ತಿದ್ದ ವೇಳೆ ಬಂಧಿಸಿದ್ದು, ಆತನಿಂದ ಎರಡು ಜಿಂಕೆ ಕೊಂಬುಗಳು ಮತ್ತು ಎರಡು ಆಮೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಬಂಧಿಸಿ ವಿಚಾಣೆಗೆ ಒಳಪಡಿಸಿದ ವೇಳೆ ವನ್ಯಜೀವಿ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದೆ. ಬಂಧಿತನು ಹಲವು ದಿನಗಳಿಂದ ವನ್ಯ ಜೀವಿಗಳನ್ನು ಬೇಟೆಯಾಡುತ್ತಿದ್ದ ಎಂಬ ಸಂಗತಿ ತಿಳಿದು ಬಂದಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಲಯ ಅಣ್ಯಾಧಿಕಾರಿ ಸುನೀತಾ ತಿಳಿಸಿದ್ದಾರೆ.