‘ಶ್ರೀರಂಗಪಟ್ಟಣದ ಪಶ್ಚಿಮ ವಾಹಿಸಿ, ಗೋಸಾಯಿ ಘಾಟ್, ಗಂಜಾಂನ ಸಂಗಮದಲ್ಲಿ ಹಿಂದಿನಿಂದಲೂ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಸ್ಥಿ ವಿಸರ್ಜನೆ ಕಾರ್ಯವನ್ನು ಮಾಡಿಕೊಂಡು ಬರಲಾಗುತ್ತಿದೆ. ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಅನೇಕ ಗಣ್ಯರ ಅಸ್ಥಿ ವಿಸರ್ಜಿಸಲಾಗಿದೆ. ಆದರೆ, ಕೊರೊನಾ ಕಾರಣದಿಂದ ಅಸ್ಥಿ ವಿಸರ್ಜಿ ಸುವುದನ್ನು ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದರು.