<p><strong>ಮಂಡ್ಯ:</strong> ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸಮಿತಿಯ ಶಿವರಾಜು ಮಳಿಗ ಮಾತನಾಡಿ, ‘ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಸಹಾಯಕರು, ಕ್ಲೀನರ್ ಕಾರ್ಮಿಕರು ಸೇರಿದಂತೆ 15 ಸಾವಿರಕ್ಕೂ ಹೆಚ್ಚು ನೌಕರರನ್ನು ಕಾಯಂ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾರ್ಮಿಕರೆಂದು ಗುರುತಿಸಿದ್ದರೂ ನಗರಾಭಿವೃದ್ಧಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ. ನೇರ ಪಾವತಿ ಹಾಗೂ ನೇರ ನೇಮಕಾತಿ ಹೊರಗುತ್ತಿಗೆ ಎಂದು ಅನ್ಯಾಯ ಮಾಡಿದ್ದಾರೆ. ಈಗಲೂ ಹೊರಗುತ್ತಿಗೆಯಲ್ಲಿ ಮುಂದುವರಿಸಿರುವುದು ಸರ್ಕಾರದ ನೀತಿ ಖಂಡನೀಯವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನಕಾರರು ಇಒ ಸಿಂಧೂರಿ ಅವರಿಗೆ ಮನವಿ ಸಲ್ಲಿಸಿದರು. </p>.<p>ಸಮಿತಿಯ ಶಂಕರ್ ನಿಡಘಟ್ಟ, ಗುರುಲಿಂಗಯ್ಯ, ಪುರುಷೋತ್ತಮ್, ಶಂಕರ್, ನವೀನ್ಕುಮಾರ್, ಲೋಕೇಶ್, ಜಯಲಕ್ಷ್ಮಿ, ಜ್ಯೋತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸಮಿತಿಯ ಶಿವರಾಜು ಮಳಿಗ ಮಾತನಾಡಿ, ‘ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಸಹಾಯಕರು, ಕ್ಲೀನರ್ ಕಾರ್ಮಿಕರು ಸೇರಿದಂತೆ 15 ಸಾವಿರಕ್ಕೂ ಹೆಚ್ಚು ನೌಕರರನ್ನು ಕಾಯಂ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾರ್ಮಿಕರೆಂದು ಗುರುತಿಸಿದ್ದರೂ ನಗರಾಭಿವೃದ್ಧಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ. ನೇರ ಪಾವತಿ ಹಾಗೂ ನೇರ ನೇಮಕಾತಿ ಹೊರಗುತ್ತಿಗೆ ಎಂದು ಅನ್ಯಾಯ ಮಾಡಿದ್ದಾರೆ. ಈಗಲೂ ಹೊರಗುತ್ತಿಗೆಯಲ್ಲಿ ಮುಂದುವರಿಸಿರುವುದು ಸರ್ಕಾರದ ನೀತಿ ಖಂಡನೀಯವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನಕಾರರು ಇಒ ಸಿಂಧೂರಿ ಅವರಿಗೆ ಮನವಿ ಸಲ್ಲಿಸಿದರು. </p>.<p>ಸಮಿತಿಯ ಶಂಕರ್ ನಿಡಘಟ್ಟ, ಗುರುಲಿಂಗಯ್ಯ, ಪುರುಷೋತ್ತಮ್, ಶಂಕರ್, ನವೀನ್ಕುಮಾರ್, ಲೋಕೇಶ್, ಜಯಲಕ್ಷ್ಮಿ, ಜ್ಯೋತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>