ಶಾಸಕರು, ಸಂಸದರು, ಹಿರಿಯ ಅಧಿಕಾರಿಗಳು ಇದೇ ಮಾರ್ಗವಾಗಿ ಸಂಚರಿಸಿದರೂ ರಸ್ತೆ ಅಭಿವೃದ್ಧಿಯ ಬಗ್ಗೆ ಗಮನಹರಿಸಿಲ್ಲ. ನಾಗಮಂಗಲ ಮತ್ತು ಮದ್ದೂರು ವಿಧಾನಸಭಾ ಕ್ಷೇತ್ರಗಳಿಗೆ ಸೇರುವ ರಸ್ತೆ ಇದಾಗಿದ್ದು, ಎರಡೂ ಕ್ಷೇತ್ರಗಳ ಶಾಸಕರು ಅಭಿವೃದ್ಧಿಗೆ ಗಮನಹರಿಸಬೇಕು ಎಂದು ರೈತ ಸಂಘದ ಮುಖಂಡರಾದ ಗೊಲ್ಲರದೊಡ್ಡಿ ಅಶೋಕ, ಕೀಳಘಟ್ಟ ನಂಜುಂಡಯ್ಯ, ಪಣ್ಣೆದೊಡ್ಡಿ ವೆಂಕಟೇಶ್ ಒತ್ತಾಯಿಸಿದರು.