<p><strong>ಮಂಡ್ಯ:</strong> ಜಿಲ್ಲೆಯಲ್ಲಿ ಗುರುತಿಸಿರುವ 802 ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಗಳಿಗೆ ತಲಾ ಐದು ಎಕರೆ ಜಮೀನು ನೀಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಸರ್ಎಂ.ವಿ.ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು, ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಹೊರಟರು.</p>.<p>ಜಿಲ್ಲೆಯಲ್ಲಿ ಹೊಸದಾಗಿ ನಗರಸಭೆ, ಪುರಸಭೆ ಗ್ರಾಮ ಪಂಚಾಯಿತಿಗಳಲ್ಲಿ ಸ್ವಯಂ ಘೋಷಣಾ ನಮೂನೆ ಮೂಲಕ ಅರ್ಜಿ ಸಲ್ಲಿಸಿರುವ 700 ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಕುಟುಂಬಳೆಂದು ಪರಿಗಣಿಸಿ ₹40 ಸಾವಿರ ಒಟಿಎ ಹಣ ಮತ್ತು ಐಡಿ ಕಾರ್ಡ್ ವಿತರಣೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಫಾಯಿ ಕರ್ಮಚಾರಿಗಳಿಗೆ ನಿವೇಶನ ರಹಿತರಿಗೆ ಮಾತ್ರ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಹೋಬಳಿ, ಮೊಗರಹಳ್ಳಿ ಸ.ನಂ.126 ರಲ್ಲಿ 11.29 ಎಕೆರೆಯನ್ನು ಆಶ್ರಯ ನಿವೇಶನಕ್ಕಾಗಿ ಮಂಜೂರು ಮಾಡಿರುವ ಸರ್ಕಾರಿ ಸಮೀನಿನಲ್ಲಿ ನಿವೇಶನ ಅಥವಾ ಮನೆಗಳನ್ನು ಕಟ್ಟಿಸಿಕೊಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>‘ನಗರಸಭೆ ಮತ್ತು ಪುರಸಭೆಗಳಲ್ಲಿ ಹೊರಗುತ್ತಿಗೆ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಾದ ಲೋಡರ್ಸ್, ಸಹಾಯಕರು, ಚಾಲಕರು, ವಾಟರ್ ಮ್ಯಾನ್ಗಳನ್ನು ಕೂಡಲೇ ನೇರ ಪಾವತಿ ಅಡಿ ನೇಮಕ ಮಾಡಲು ಕ್ರಮ ವಹಿಸಬೇಕು. ನೀವೇಶನರಹಿತರಿಗೆ ನಿವೇಶನ ನೀಡಬೇಕು. ಜೊತೆಗೆ 3 ತಿಂಗಳೊಳಗೆ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿದರು.</p>.<p>ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಮಕ್ಕಳೆಲ್ಲರೂ ಶಿಕ್ಷಣ ಮುಗಿಸಿ ನಿರುದ್ಯೋಗಿಗಳಾಗಿದ್ದರೆ ಅವರನ್ನು ಗುರುತಿಸಿ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು. ಸಫಾಯಿ ಕರ್ಮಚಾರಿಗಳಿಗೆ ತುಂಡು ಗುತ್ತಿಗೆ ನೀಡಿ ಸಹಕರಿಸಬೇಕು ಎಂದು ಒತ್ತಾಯಿಸಿದರು.</p>.<p>ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಆರ್.ಕೃಷ್ಣ, ಗೌರವಾಧ್ಯಕ್ಷ ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷೆ ನಾಗಮಣಿ, ಉಪಾಧ್ಯಕ್ಷ ಆರ್.ನಾಗರಾಜು, ಮುಖಂಡರಾದ ಪಳನಿ, ಅವನಾಸಿ, ವಿಜಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲೆಯಲ್ಲಿ ಗುರುತಿಸಿರುವ 802 ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಗಳಿಗೆ ತಲಾ ಐದು ಎಕರೆ ಜಮೀನು ನೀಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಅರುಂಧತಿಯಾರ್ ಮಹಾಸಭಾದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಸರ್ಎಂ.ವಿ.ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು, ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಹೊರಟರು.</p>.<p>ಜಿಲ್ಲೆಯಲ್ಲಿ ಹೊಸದಾಗಿ ನಗರಸಭೆ, ಪುರಸಭೆ ಗ್ರಾಮ ಪಂಚಾಯಿತಿಗಳಲ್ಲಿ ಸ್ವಯಂ ಘೋಷಣಾ ನಮೂನೆ ಮೂಲಕ ಅರ್ಜಿ ಸಲ್ಲಿಸಿರುವ 700 ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಕುಟುಂಬಳೆಂದು ಪರಿಗಣಿಸಿ ₹40 ಸಾವಿರ ಒಟಿಎ ಹಣ ಮತ್ತು ಐಡಿ ಕಾರ್ಡ್ ವಿತರಣೆ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಸಫಾಯಿ ಕರ್ಮಚಾರಿಗಳಿಗೆ ನಿವೇಶನ ರಹಿತರಿಗೆ ಮಾತ್ರ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಹೋಬಳಿ, ಮೊಗರಹಳ್ಳಿ ಸ.ನಂ.126 ರಲ್ಲಿ 11.29 ಎಕೆರೆಯನ್ನು ಆಶ್ರಯ ನಿವೇಶನಕ್ಕಾಗಿ ಮಂಜೂರು ಮಾಡಿರುವ ಸರ್ಕಾರಿ ಸಮೀನಿನಲ್ಲಿ ನಿವೇಶನ ಅಥವಾ ಮನೆಗಳನ್ನು ಕಟ್ಟಿಸಿಕೊಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>‘ನಗರಸಭೆ ಮತ್ತು ಪುರಸಭೆಗಳಲ್ಲಿ ಹೊರಗುತ್ತಿಗೆ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಾದ ಲೋಡರ್ಸ್, ಸಹಾಯಕರು, ಚಾಲಕರು, ವಾಟರ್ ಮ್ಯಾನ್ಗಳನ್ನು ಕೂಡಲೇ ನೇರ ಪಾವತಿ ಅಡಿ ನೇಮಕ ಮಾಡಲು ಕ್ರಮ ವಹಿಸಬೇಕು. ನೀವೇಶನರಹಿತರಿಗೆ ನಿವೇಶನ ನೀಡಬೇಕು. ಜೊತೆಗೆ 3 ತಿಂಗಳೊಳಗೆ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿದರು.</p>.<p>ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಮಕ್ಕಳೆಲ್ಲರೂ ಶಿಕ್ಷಣ ಮುಗಿಸಿ ನಿರುದ್ಯೋಗಿಗಳಾಗಿದ್ದರೆ ಅವರನ್ನು ಗುರುತಿಸಿ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು. ಸಫಾಯಿ ಕರ್ಮಚಾರಿಗಳಿಗೆ ತುಂಡು ಗುತ್ತಿಗೆ ನೀಡಿ ಸಹಕರಿಸಬೇಕು ಎಂದು ಒತ್ತಾಯಿಸಿದರು.</p>.<p>ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಆರ್.ಕೃಷ್ಣ, ಗೌರವಾಧ್ಯಕ್ಷ ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷೆ ನಾಗಮಣಿ, ಉಪಾಧ್ಯಕ್ಷ ಆರ್.ನಾಗರಾಜು, ಮುಖಂಡರಾದ ಪಳನಿ, ಅವನಾಸಿ, ವಿಜಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>