<p><strong>ಕೆ.ಆರ್.ಪೇಟೆ:</strong> ಜೈ ಮಹಾರಾಷ್ಟ್ರ, ಜೈ ಶಿವಾಜಿ ಎಂದು ಘೋಷಣೆ ಕೂಗಿದ್ದ ಪೌರಾಡಳಿತ ಸಚಿವ ನಾರಾಯಣಗೌಡ ರಾಜೀನಾಮೆ ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಘಟಕದ ಸದಸ್ಯರು ಹಾಗೂ ವಕೀಲರ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಪ್ರವಾಸಿಮಂದಿರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಜಯ ಕರ್ನಾಟಕ ಸಂಘಟನೆಯ ಸದಸ್ಯರು, ನಾರಾಯಣಗೌಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕರ್ನಾಟಕದಲ್ಲಿ ಹುಟ್ಟಿದ್ದ ನಾರಾಯಣಗೌಡ ಮುಂಬೈಗೆ ಹೋಗಿದ್ದರು. ನಂತರ, ವಾಪಸ್ ಆಗಿ ಶಾಸಕರಾಗಿ, ಸಚಿವರಾಗಿದ್ದಾರೆ. ಕನ್ನಡ ನಾಡು, ನುಡಿ, ನೆಲ-ಜಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳದೇ, ಮಹಾರಾಷ್ಟ್ರಕ್ಕೆ ಜೈ, ಮರಾಠಿಗರಿಗೆ ಜೈ ಎಂದು ಘೋಷಣೆ ಕೂಗುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ನಾರಾಯಣಗೌಡರು ಶಾಸಕರಾಗಲು, ಸಚಿವರಾಗಲು ಅನರ್ಹರು ಎಂದು ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಕುಮಾರ್ ದೂರಿದರು.</p>.<p>ಸಂಘಟನೆಯ ಬಾವಾಜಿ ಚಂದ್ರು, ಮಹೇಶ್, ಮದನ್ ಗೌಡ, ವಿ.ಲೋಕೇಶ್, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಮಧು, ಜಯಲಕ್ಷ್ಮೀ, ರಾಧಾ, ಗೌರಮ್ಮ, ರಾಜಮ್ಮ ಇದ್ದರು.</p>.<p class="Subhead">ಕಲಾಪದಿಂದ ಹೊರಗುಳಿದ ವಕೀಲರು: ವಕೀಲರ ಸಂಘದ ಸದಸ್ಯರು ಕಲಾಪ ದಿಂದ ಹೊರಗುಳಿಯುವ ಮೂಲಕ ಪ್ರತಿಭಟನೆ ನಡೆಸಿದರು.</p>.<p>ಜವಾಬ್ದಾರಿಯುತ ಸ್ಥಾನದಲ್ಲಿರುವ ನಾರಾಯಣಗೌಡರು ಮಹಾರಾಷ್ಟ್ರಕ್ಕೆ ಜೈಕಾರ ಕೂಗಿರುವುದು ಖಂಡನೀಯ ಎಂದು ವಕೀಲರ ಸಂಘದ ಉಪಾಧ್ಯಕ್ಷ ಕೆ.ಆರ್.ಇಂದ್ರಕುಮಾರ್ ತಿಳಿಸಿದರು.</p>.<p>ಸಂಘದ ಖಜಾಂಚಿ ಬಿ.ಕೆ.ಯೋಗೇಶ್, ಜಂಟಿ ಕಾರ್ಯದರ್ಶಿ ಅನ್ವೇಶ್, ಪ್ರಭಾಕರ್, ಕೆರೆಮೇಗಳ ಕೊಪ್ಪಲು ಶಂಕರೇಗೌಡ, ಜಗದೀಶ್, ನವೀನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ಜೈ ಮಹಾರಾಷ್ಟ್ರ, ಜೈ ಶಿವಾಜಿ ಎಂದು ಘೋಷಣೆ ಕೂಗಿದ್ದ ಪೌರಾಡಳಿತ ಸಚಿವ ನಾರಾಯಣಗೌಡ ರಾಜೀನಾಮೆ ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಘಟಕದ ಸದಸ್ಯರು ಹಾಗೂ ವಕೀಲರ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಪ್ರವಾಸಿಮಂದಿರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಜಯ ಕರ್ನಾಟಕ ಸಂಘಟನೆಯ ಸದಸ್ಯರು, ನಾರಾಯಣಗೌಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕರ್ನಾಟಕದಲ್ಲಿ ಹುಟ್ಟಿದ್ದ ನಾರಾಯಣಗೌಡ ಮುಂಬೈಗೆ ಹೋಗಿದ್ದರು. ನಂತರ, ವಾಪಸ್ ಆಗಿ ಶಾಸಕರಾಗಿ, ಸಚಿವರಾಗಿದ್ದಾರೆ. ಕನ್ನಡ ನಾಡು, ನುಡಿ, ನೆಲ-ಜಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳದೇ, ಮಹಾರಾಷ್ಟ್ರಕ್ಕೆ ಜೈ, ಮರಾಠಿಗರಿಗೆ ಜೈ ಎಂದು ಘೋಷಣೆ ಕೂಗುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ನಾರಾಯಣಗೌಡರು ಶಾಸಕರಾಗಲು, ಸಚಿವರಾಗಲು ಅನರ್ಹರು ಎಂದು ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಕುಮಾರ್ ದೂರಿದರು.</p>.<p>ಸಂಘಟನೆಯ ಬಾವಾಜಿ ಚಂದ್ರು, ಮಹೇಶ್, ಮದನ್ ಗೌಡ, ವಿ.ಲೋಕೇಶ್, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಮಧು, ಜಯಲಕ್ಷ್ಮೀ, ರಾಧಾ, ಗೌರಮ್ಮ, ರಾಜಮ್ಮ ಇದ್ದರು.</p>.<p class="Subhead">ಕಲಾಪದಿಂದ ಹೊರಗುಳಿದ ವಕೀಲರು: ವಕೀಲರ ಸಂಘದ ಸದಸ್ಯರು ಕಲಾಪ ದಿಂದ ಹೊರಗುಳಿಯುವ ಮೂಲಕ ಪ್ರತಿಭಟನೆ ನಡೆಸಿದರು.</p>.<p>ಜವಾಬ್ದಾರಿಯುತ ಸ್ಥಾನದಲ್ಲಿರುವ ನಾರಾಯಣಗೌಡರು ಮಹಾರಾಷ್ಟ್ರಕ್ಕೆ ಜೈಕಾರ ಕೂಗಿರುವುದು ಖಂಡನೀಯ ಎಂದು ವಕೀಲರ ಸಂಘದ ಉಪಾಧ್ಯಕ್ಷ ಕೆ.ಆರ್.ಇಂದ್ರಕುಮಾರ್ ತಿಳಿಸಿದರು.</p>.<p>ಸಂಘದ ಖಜಾಂಚಿ ಬಿ.ಕೆ.ಯೋಗೇಶ್, ಜಂಟಿ ಕಾರ್ಯದರ್ಶಿ ಅನ್ವೇಶ್, ಪ್ರಭಾಕರ್, ಕೆರೆಮೇಗಳ ಕೊಪ್ಪಲು ಶಂಕರೇಗೌಡ, ಜಗದೀಶ್, ನವೀನ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>