<p><strong>ಮಂಡ್ಯ: </strong>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದೆ ಸುಮಲತಾ ಅವರು ಕೆ ಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವ ವಿಡಿಯೊ ಹಾಗೂ ಚಿತ್ರಗಳನ್ನು ಹಂಚಿಕೊಂಡು ಅಶ್ಲೀಲವಾಗಿ ಸಂದೇಶ ಪ್ರಕಟಿಸಿದ್ದ ಐವರು ಫೇಸ್ಬುಕ್ ಬಳಕೆದಾರರ ವಿರುದ್ಧ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೇಲೂರು ಸೋಮಶೇಖರ್ ಶನಿವಾರ ನೀಡಿರುವ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ.</p>.<p>ಎಚ್.ಜಿ.ಹರೀಶ್, ಸುರೇಂದ್ರ ಶ್ರೀನಿವಾಸಗೌಡ, ಕರ್ನಾಟಕ ಜೆಡಿಎಸ್ ಖಾತೆ ಬಳಕೆದಾರ, ಆರ್.ಇ.ಸಹೀದ್, ಫ್ರೈಡ್ ಆಫ್ ಯು.ಕೆ.ಖಾತೆ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>ಶುಕ್ರವಾರ ಗೌರಿ ಹಬ್ಬದ ದಿನ ಸುಮಲತಾ ಸೇರಿ ಹಲವು ಮುಖಂಡರು ಮುಖ್ಯಮಂತ್ರಿಗಳ ಜೊತೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದರು.ಕೆಲ ಕಿಡಿಗೇಡಿಗಳು ಪೂಜೆ ಸಲ್ಲಿಸುವ ದೃಶ್ಯಾವಳಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅವಹೇಳನಾಕಾರಿಯಾಗಿ ಸಂದೇಶ ಹಾಕಿದ್ದರು.</p>.<p>'ಅಶ್ಲೀಲವಾಗಿ ಸಂದೇಶ ಪ್ರಕಟಿಸಿದ ಫೇಸ್ಬುಕ್ ಬಳಕೆದಾರರನ್ನು ಶೀಘ್ರ ಬಂಧಿಸಲಾಗುವುದು. ಸಂದೇಶ ಹಂಚಿಕೊಂಡವರಿಗೂ ನೋಟಿಸ್ ನೀಡಲಾಗುವುದು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದೆ ಸುಮಲತಾ ಅವರು ಕೆ ಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವ ವಿಡಿಯೊ ಹಾಗೂ ಚಿತ್ರಗಳನ್ನು ಹಂಚಿಕೊಂಡು ಅಶ್ಲೀಲವಾಗಿ ಸಂದೇಶ ಪ್ರಕಟಿಸಿದ್ದ ಐವರು ಫೇಸ್ಬುಕ್ ಬಳಕೆದಾರರ ವಿರುದ್ಧ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೇಲೂರು ಸೋಮಶೇಖರ್ ಶನಿವಾರ ನೀಡಿರುವ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ.</p>.<p>ಎಚ್.ಜಿ.ಹರೀಶ್, ಸುರೇಂದ್ರ ಶ್ರೀನಿವಾಸಗೌಡ, ಕರ್ನಾಟಕ ಜೆಡಿಎಸ್ ಖಾತೆ ಬಳಕೆದಾರ, ಆರ್.ಇ.ಸಹೀದ್, ಫ್ರೈಡ್ ಆಫ್ ಯು.ಕೆ.ಖಾತೆ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>ಶುಕ್ರವಾರ ಗೌರಿ ಹಬ್ಬದ ದಿನ ಸುಮಲತಾ ಸೇರಿ ಹಲವು ಮುಖಂಡರು ಮುಖ್ಯಮಂತ್ರಿಗಳ ಜೊತೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದರು.ಕೆಲ ಕಿಡಿಗೇಡಿಗಳು ಪೂಜೆ ಸಲ್ಲಿಸುವ ದೃಶ್ಯಾವಳಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಅವಹೇಳನಾಕಾರಿಯಾಗಿ ಸಂದೇಶ ಹಾಕಿದ್ದರು.</p>.<p>'ಅಶ್ಲೀಲವಾಗಿ ಸಂದೇಶ ಪ್ರಕಟಿಸಿದ ಫೇಸ್ಬುಕ್ ಬಳಕೆದಾರರನ್ನು ಶೀಘ್ರ ಬಂಧಿಸಲಾಗುವುದು. ಸಂದೇಶ ಹಂಚಿಕೊಂಡವರಿಗೂ ನೋಟಿಸ್ ನೀಡಲಾಗುವುದು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>