<p><strong>ನಾಗಮಂಗಲ</strong>: ಎರಡು ವರ್ಷಗಳಿಂದ ಕಾಡುತ್ತಿರುವ ಕೊರೊನಾದಿಂದಾಗಿ ಗಣೇಶ ಮೂರ್ತಿಗಳ ಬೆಲೆ ಏರಿಕೆಯಾಗಿದ್ದು, ಭಕ್ತರಿಗೆ ಬೇಸರ ತಂದಿದೆ.</p>.<p>ತಾಲ್ಲೂಕಿನ ಬಹುತೇಕ ರಸ್ತೆಗಳಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರು ವಿಜೃಂಭಣೆಯಿಂದ ಹಬ್ಬ ಆಚರಿಸುತ್ತಿದ್ದರು. ಆದರೆ ಈ ಬಾರಿ ಸರ್ಕಾರದ ಕೋವಿಡ್ ಮಾರ್ಗಸೂಚಿಯಿಂದಾಗಿ ಗಣೇಶನನ್ನು ಪ್ರತಿಷ್ಠಾಪಿಸಲು ಭಕ್ತರು ನಿರಾಸಕ್ತಿ ತಳೆದಿದ್ದಾರೆ. ಮಾರುಕಟ್ಟೆಯಲ್ಲಿ ಮೂರ್ತಿಗಳನ್ನು ಖರೀದಿಸಲು ಬರುವವರ ಸಂಖ್ಯೆಯೂ ಕಡಿಮೆಯಾಗಿದೆ.</p>.<p>ಬೆರಳೆಣಿಕೆಯಷ್ಟು ಗ್ರಾಹಕರು ಮಾತ್ರ ಪರಿಸರಸ್ನೇಹಿ ಮಣ್ಣಿನ ಮೂರ್ತಿಗಳನ್ನು ಖರೀದಿಸಲು ಮುಂದಾಗಿದ್ದು, ಬಹುತೇಕ ಗ್ರಾಹಕರ ದೃಷ್ಟಿ ಬಣ್ಣಬಣ್ಣದ ಮೂರ್ತಿಗಳ ಕಡೆಗೇ ಇತ್ತು.</p>.<p>ಈ ಬಾರಿ ಮೂರ್ತಿಗಳ ಪೂರೈಕೆ ಕಡಿಮೆಯಾಗಿ ಬೆಲೆ ಹೆಚ್ಚಾಗಿದ್ದು, ಕೇವಲ ಒಂದು ಲೋಡ್ ಮೂರ್ತಿಗಳನ್ನು ತಂದಿದ್ದೇವೆ. ಅವುಗಳನ್ನು ಖರೀದಿಸಲೂ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಿ ರವಿ ಹೇಳಿದರು.</p>.<p>ಆಕರ್ಷಕವಾದ ಮತ್ತು ವಿಭಿನ್ನವಾದ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬರದಿರುವುದು ಈ ಬಾರಿ ನಿರಾಸೆಗೆ ಕಾರಣವಾಗಿದೆ. ಪುಟ್ಟ ಗಣೇಶ ಮೂರ್ತಿಗಳಿಗೇ ಹೆಚ್ಚಿನ ಹಣ ನಿಗದಿ ಮಾಡಲಾಗಿದ್ದು, ಹಬ್ಬದ ಉತ್ಸಾಹವನ್ನು ಕಡಿಮೆ ಮಾಡಿದೆ ಎಂದು ಪಟ್ಟಣದ ಚಂದನ್ ಹೇಳಿದರು.</p>.<p>ಗೌರಿ ಗಣೇಶ ಹಬ್ಬದ ಆಚರಣೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ದಿನಸಿ ಅಂಗಡಿ ಸೇರಿದಂತೆ ಬಟ್ಟೆ ಅಂಗಡಿ, ಒಡವೆ ಅಂಗಡಿ, ಹಣ್ಣಿನ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂತು. ಜನರು ವಸ್ತುಗಳನ್ನು ಖರೀದಿಸುವಾಗ ಗುಂಪುಗೂಡಿದ್ದರು. ಕೋವಿಡ್ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಪುರಸಭೆ ಅಧಿಕಾರಿಗಳೂ ಕ್ರಮ ವಹಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ಎರಡು ವರ್ಷಗಳಿಂದ ಕಾಡುತ್ತಿರುವ ಕೊರೊನಾದಿಂದಾಗಿ ಗಣೇಶ ಮೂರ್ತಿಗಳ ಬೆಲೆ ಏರಿಕೆಯಾಗಿದ್ದು, ಭಕ್ತರಿಗೆ ಬೇಸರ ತಂದಿದೆ.</p>.<p>ತಾಲ್ಲೂಕಿನ ಬಹುತೇಕ ರಸ್ತೆಗಳಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತರು ವಿಜೃಂಭಣೆಯಿಂದ ಹಬ್ಬ ಆಚರಿಸುತ್ತಿದ್ದರು. ಆದರೆ ಈ ಬಾರಿ ಸರ್ಕಾರದ ಕೋವಿಡ್ ಮಾರ್ಗಸೂಚಿಯಿಂದಾಗಿ ಗಣೇಶನನ್ನು ಪ್ರತಿಷ್ಠಾಪಿಸಲು ಭಕ್ತರು ನಿರಾಸಕ್ತಿ ತಳೆದಿದ್ದಾರೆ. ಮಾರುಕಟ್ಟೆಯಲ್ಲಿ ಮೂರ್ತಿಗಳನ್ನು ಖರೀದಿಸಲು ಬರುವವರ ಸಂಖ್ಯೆಯೂ ಕಡಿಮೆಯಾಗಿದೆ.</p>.<p>ಬೆರಳೆಣಿಕೆಯಷ್ಟು ಗ್ರಾಹಕರು ಮಾತ್ರ ಪರಿಸರಸ್ನೇಹಿ ಮಣ್ಣಿನ ಮೂರ್ತಿಗಳನ್ನು ಖರೀದಿಸಲು ಮುಂದಾಗಿದ್ದು, ಬಹುತೇಕ ಗ್ರಾಹಕರ ದೃಷ್ಟಿ ಬಣ್ಣಬಣ್ಣದ ಮೂರ್ತಿಗಳ ಕಡೆಗೇ ಇತ್ತು.</p>.<p>ಈ ಬಾರಿ ಮೂರ್ತಿಗಳ ಪೂರೈಕೆ ಕಡಿಮೆಯಾಗಿ ಬೆಲೆ ಹೆಚ್ಚಾಗಿದ್ದು, ಕೇವಲ ಒಂದು ಲೋಡ್ ಮೂರ್ತಿಗಳನ್ನು ತಂದಿದ್ದೇವೆ. ಅವುಗಳನ್ನು ಖರೀದಿಸಲೂ ಗ್ರಾಹಕರು ಬರುತ್ತಿಲ್ಲ ಎಂದು ವ್ಯಾಪಾರಿ ರವಿ ಹೇಳಿದರು.</p>.<p>ಆಕರ್ಷಕವಾದ ಮತ್ತು ವಿಭಿನ್ನವಾದ ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬರದಿರುವುದು ಈ ಬಾರಿ ನಿರಾಸೆಗೆ ಕಾರಣವಾಗಿದೆ. ಪುಟ್ಟ ಗಣೇಶ ಮೂರ್ತಿಗಳಿಗೇ ಹೆಚ್ಚಿನ ಹಣ ನಿಗದಿ ಮಾಡಲಾಗಿದ್ದು, ಹಬ್ಬದ ಉತ್ಸಾಹವನ್ನು ಕಡಿಮೆ ಮಾಡಿದೆ ಎಂದು ಪಟ್ಟಣದ ಚಂದನ್ ಹೇಳಿದರು.</p>.<p>ಗೌರಿ ಗಣೇಶ ಹಬ್ಬದ ಆಚರಣೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ದಿನಸಿ ಅಂಗಡಿ ಸೇರಿದಂತೆ ಬಟ್ಟೆ ಅಂಗಡಿ, ಒಡವೆ ಅಂಗಡಿ, ಹಣ್ಣಿನ ಅಂಗಡಿಗಳಲ್ಲಿ ಜನದಟ್ಟಣೆ ಕಂಡುಬಂತು. ಜನರು ವಸ್ತುಗಳನ್ನು ಖರೀದಿಸುವಾಗ ಗುಂಪುಗೂಡಿದ್ದರು. ಕೋವಿಡ್ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಪುರಸಭೆ ಅಧಿಕಾರಿಗಳೂ ಕ್ರಮ ವಹಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>