<p><strong>ಮಂಡ್ಯ: </strong>ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿರುವುದನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದ ಹೊಸಹಳ್ಳಿಯ ಸರ್ ಎಂ.ವಿಶ್ವೇಶ್ವರಯ್ಯ ಗೆಳೆಯರ ಬಳಗದ ಕಾರ್ಯಕರ್ತರು ನಗರದಲ್ಲಿ ಗುರುವಾರ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ನಗರದ ಹೊಸಹಳ್ಳಿ ವೃತ್ತದ ಬಳಿ ಕಾರ್ಯಕರ್ತರು ಗಣೇಶ ಮೂರ್ತಿಯನ್ನು ತಲೆ ಮೇಲೆ ಹೊತ್ತುಕೊಂಡು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸರ್ಕಾರವು ಹಿಂದೂಗಳ ಹಬ್ಬಗಳಿಗೆ ಬೆಂಬಲವಾಗಿ ನಿಲ್ಲಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಇಷ್ಟೇ ದಿನ ಕೂರಿಸಬೇಕು, ಇಷ್ಟೇ ಜನ ಇರಬೇಕು, ಇಂಥದ್ದೇ ನಿಯಮ ಪಾಲಿಸಬೇಕು ಎಂದು ಹೇಳುವ ಸರ್ಕಾರದ ನಡೆ ಖಂಡನೀಯ. ಇದು ಹಿಂದೂಗಳ ಭಾವನೆಗೆ ಧಕ್ಕೆ ತರುವ ವಿಷಯವಾಗಿದೆ. ತಕ್ಷಣ ಈ ನಿಯಮಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಮೀರುವುದಿಲ್ಲ. ಬೆಂಗಳೂರಿನಲ್ಲಿ ಬಿಬಿಎಂಪಿ ಹೊರಡಿಸಿರುವ ನಿಯಮಗಳನ್ನು ಹಿಂಪಡೆಯಬೇಕು. ಇದಕ್ಕೆ ಬೆಂಗಳೂರಿನಲ್ಲಿ ತೀವ್ರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ಬೆಂಬಲವಿದೆ. ಸರ್ಕಾರ ನಿಯಮ ವಾಪಸ್ ಪಡೆಯದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.</p>.<p>ಮುಖಂಡರಾದ ಸಿದ್ದರಾಜುಗೌಡ, ಹೊಸಹಳ್ಳಿ ಶಿವು, ನಾಗಣ್ಣ ಮಲ್ಲಪ್ಪ, ಎಚ್.ಕೆ.ಮಂಜು, ಸಿದ್ದಲಿಂಗು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿರುವುದನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದ ಹೊಸಹಳ್ಳಿಯ ಸರ್ ಎಂ.ವಿಶ್ವೇಶ್ವರಯ್ಯ ಗೆಳೆಯರ ಬಳಗದ ಕಾರ್ಯಕರ್ತರು ನಗರದಲ್ಲಿ ಗುರುವಾರ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ನಗರದ ಹೊಸಹಳ್ಳಿ ವೃತ್ತದ ಬಳಿ ಕಾರ್ಯಕರ್ತರು ಗಣೇಶ ಮೂರ್ತಿಯನ್ನು ತಲೆ ಮೇಲೆ ಹೊತ್ತುಕೊಂಡು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸರ್ಕಾರವು ಹಿಂದೂಗಳ ಹಬ್ಬಗಳಿಗೆ ಬೆಂಬಲವಾಗಿ ನಿಲ್ಲಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಇಷ್ಟೇ ದಿನ ಕೂರಿಸಬೇಕು, ಇಷ್ಟೇ ಜನ ಇರಬೇಕು, ಇಂಥದ್ದೇ ನಿಯಮ ಪಾಲಿಸಬೇಕು ಎಂದು ಹೇಳುವ ಸರ್ಕಾರದ ನಡೆ ಖಂಡನೀಯ. ಇದು ಹಿಂದೂಗಳ ಭಾವನೆಗೆ ಧಕ್ಕೆ ತರುವ ವಿಷಯವಾಗಿದೆ. ತಕ್ಷಣ ಈ ನಿಯಮಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಮೀರುವುದಿಲ್ಲ. ಬೆಂಗಳೂರಿನಲ್ಲಿ ಬಿಬಿಎಂಪಿ ಹೊರಡಿಸಿರುವ ನಿಯಮಗಳನ್ನು ಹಿಂಪಡೆಯಬೇಕು. ಇದಕ್ಕೆ ಬೆಂಗಳೂರಿನಲ್ಲಿ ತೀವ್ರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ಬೆಂಬಲವಿದೆ. ಸರ್ಕಾರ ನಿಯಮ ವಾಪಸ್ ಪಡೆಯದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.</p>.<p>ಮುಖಂಡರಾದ ಸಿದ್ದರಾಜುಗೌಡ, ಹೊಸಹಳ್ಳಿ ಶಿವು, ನಾಗಣ್ಣ ಮಲ್ಲಪ್ಪ, ಎಚ್.ಕೆ.ಮಂಜು, ಸಿದ್ದಲಿಂಗು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>