<p><strong>ಮದ್ದೂರು</strong>: ‘ಧರ್ಮಸ್ಥಳದ ಬಗ್ಗೆ ಮುಸುಕುಧಾರಿ ವ್ಯಕ್ತಿಯ ಹೇಳಿಕೆಗಳು ಸತ್ಯಕ್ಕೆ ದೂರ. ಸಾವಿರಾರು ಜನರಿಗೆ ಅನ್ನ ಹಾಕಿದ ಧಣಿಯವರ ಬಗ್ಗೆ ಈ ರೀತಿ ಹೇಳಿಕೆ ಕೊಡುತ್ತಿರುವುದು ಸರಿಯಲ್ಲ’ ಎಂದು ಆತನ ಸ್ನೇಹಿತ ತಾಲ್ಲೂಕಿನ ವೈದ್ಯನಾಥಪುರದ ನಿವಾಸಿ ರಾಜು ತಿಳಿಸಿದ್ದಾನೆ.</p><p>ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧ ನನ್ನನ್ನು ಎಸ್ಐಟಿ ಅಧಿಕಾರಿಗಳು ಅರ್ಧ ಗಂಟೆ ವಿಚಾರಣೆ ನಡೆಸಿದರು. ನನಗೆ ಗೊತ್ತಿರುವ ಮಾಹಿತಿಯನ್ನು ನೀಡಿದ್ದೇನೆ’ ಎಂದರು. </p><p>‘ನಾನು ಹತ್ತು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ 4 ವರ್ಷ ಕಸ ಗುಡಿಸುವ ಕೆಲಸ ಮಾಡಿಕೊಂಡಿದ್ದೆ. ಧರ್ಮಸ್ಥಳದ ಸ್ನಾನಘಟ್ಟ, ಬಾಹುಬಲಿ ಬೆಟ್ಟ, ದೇವಸ್ಥಾನದ ಬಳಿಯೂ ಕೆಲಸ ಮಾಡಿದ್ದೇನೆ. ಧಣಿಯವರು ಅನ್ನ ಹಾಕಿ ಕೈತುಂಬ ಸಂಬಳ ಕೊಡುತ್ತಿದ್ದರು’ ಎಂದು ಹೇಳಿಕೆ ನೀಡಿದ್ದಾರೆ. </p><p>‘ಮಾಸ್ಕ್ ಮ್ಯಾನ್’ ಹಾಗೂ ನಾನು ಅಕ್ಕಪಕ್ಕದ ಮನೆಯವರಾಗಿದ್ದೆವು. ಆ ಸಂದರ್ಭದಲ್ಲಿ ಪುರುಷ ಮತ್ತು ಮಹಿಳೆಯ ಕೊಳೆತ ಶವಗಳನ್ನು ನೋಡಿದ್ದೆ. ಅವು ಮರದಲ್ಲಿ ನೇತಾಡುತ್ತಿದ್ದವು. ಮೃತದೇಹಗಳನ್ನು ಮರದಿಂದ ಕೆಳಗೆ ಇಳಿಸಿದ್ದೆ, ಆದರೆ ಹೂತು ಹಾಕಿರಲಿಲ್ಲ. ನಂತರ ಆಂಬುಲೆನ್ಸ್ ಬಂದು ತೆಗೆದುಕೊಂಡು ಹೋಯಿತು’ ಎಂದು ಮಾಹಿತಿ ನೀಡಿದ್ದಾರೆ. </p><p>‘ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ’ ಎಂಬ ಮುಸುಕುಧಾರಿಯ ಹೇಳಿಕೆ ಸತ್ಯಕ್ಕೆ ದೂರವಾದುದು. ಹಣದ ಆಸೆಗೋ ಏನೋ ಗೊತ್ತಿಲ್ಲ ಈ ರೀತಿ ಹೇಳಿಕೆ ನೀಡುತ್ತಿದ್ದಾನೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ‘ಧರ್ಮಸ್ಥಳದ ಬಗ್ಗೆ ಮುಸುಕುಧಾರಿ ವ್ಯಕ್ತಿಯ ಹೇಳಿಕೆಗಳು ಸತ್ಯಕ್ಕೆ ದೂರ. ಸಾವಿರಾರು ಜನರಿಗೆ ಅನ್ನ ಹಾಕಿದ ಧಣಿಯವರ ಬಗ್ಗೆ ಈ ರೀತಿ ಹೇಳಿಕೆ ಕೊಡುತ್ತಿರುವುದು ಸರಿಯಲ್ಲ’ ಎಂದು ಆತನ ಸ್ನೇಹಿತ ತಾಲ್ಲೂಕಿನ ವೈದ್ಯನಾಥಪುರದ ನಿವಾಸಿ ರಾಜು ತಿಳಿಸಿದ್ದಾನೆ.</p><p>ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧ ನನ್ನನ್ನು ಎಸ್ಐಟಿ ಅಧಿಕಾರಿಗಳು ಅರ್ಧ ಗಂಟೆ ವಿಚಾರಣೆ ನಡೆಸಿದರು. ನನಗೆ ಗೊತ್ತಿರುವ ಮಾಹಿತಿಯನ್ನು ನೀಡಿದ್ದೇನೆ’ ಎಂದರು. </p><p>‘ನಾನು ಹತ್ತು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ 4 ವರ್ಷ ಕಸ ಗುಡಿಸುವ ಕೆಲಸ ಮಾಡಿಕೊಂಡಿದ್ದೆ. ಧರ್ಮಸ್ಥಳದ ಸ್ನಾನಘಟ್ಟ, ಬಾಹುಬಲಿ ಬೆಟ್ಟ, ದೇವಸ್ಥಾನದ ಬಳಿಯೂ ಕೆಲಸ ಮಾಡಿದ್ದೇನೆ. ಧಣಿಯವರು ಅನ್ನ ಹಾಕಿ ಕೈತುಂಬ ಸಂಬಳ ಕೊಡುತ್ತಿದ್ದರು’ ಎಂದು ಹೇಳಿಕೆ ನೀಡಿದ್ದಾರೆ. </p><p>‘ಮಾಸ್ಕ್ ಮ್ಯಾನ್’ ಹಾಗೂ ನಾನು ಅಕ್ಕಪಕ್ಕದ ಮನೆಯವರಾಗಿದ್ದೆವು. ಆ ಸಂದರ್ಭದಲ್ಲಿ ಪುರುಷ ಮತ್ತು ಮಹಿಳೆಯ ಕೊಳೆತ ಶವಗಳನ್ನು ನೋಡಿದ್ದೆ. ಅವು ಮರದಲ್ಲಿ ನೇತಾಡುತ್ತಿದ್ದವು. ಮೃತದೇಹಗಳನ್ನು ಮರದಿಂದ ಕೆಳಗೆ ಇಳಿಸಿದ್ದೆ, ಆದರೆ ಹೂತು ಹಾಕಿರಲಿಲ್ಲ. ನಂತರ ಆಂಬುಲೆನ್ಸ್ ಬಂದು ತೆಗೆದುಕೊಂಡು ಹೋಯಿತು’ ಎಂದು ಮಾಹಿತಿ ನೀಡಿದ್ದಾರೆ. </p><p>‘ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ’ ಎಂಬ ಮುಸುಕುಧಾರಿಯ ಹೇಳಿಕೆ ಸತ್ಯಕ್ಕೆ ದೂರವಾದುದು. ಹಣದ ಆಸೆಗೋ ಏನೋ ಗೊತ್ತಿಲ್ಲ ಈ ರೀತಿ ಹೇಳಿಕೆ ನೀಡುತ್ತಿದ್ದಾನೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>