<p><strong>ಮಂಡ್ಯ:</strong> ‘ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಸಮರ್ಪಕವಾಗಿ ಓದಿ ಸದುಪಯೋಗ ಪಡಿಸಿಕೊಳ್ಳುವವರು ನಿಜವಾಗಿಯೂ ಸಾಧಕರು’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ 2025-26ನೇ ಸಾಲಿನ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 70ನೇ ಆಯವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲ ಗ್ರಂಥಾಲಯಗಳು ಸೇರಿ ಒಟ್ಟು 1.88 ಲಕ್ಷ ಪುಸ್ತಕಗಳಿವೆ ಎಂದು ತಿಳಿಸಿದರು.</p>.<p>ಎಲ್ಲ ಗ್ರಂಥಾಲಯಗಳಲ್ಲಿ 14 ಲಕ್ಷ ಜನರು ಡಿಜಿಟಲ್ ಸದಸ್ಯತ್ವ ಕಾರ್ಡ್ ಹೊಂದಿದ್ದರೆ ಹಾಗೂ 53 ಸಾವಿರ ಜನರು ಮ್ಯಾನುವಲ್ ಗ್ರಂಥಾಲಯ ಕಾರ್ಡುಗಳನ್ನು ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಗ್ರಂಥಾಲಯಗಳಿಗೆ ಓದಲು ಬರುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವಾಗಬೇಕಿದೆ. ಗ್ರಂಥಾಲಯಗಳಲ್ಲಿ ಹೆಚ್ಚಿನ ಸಮಯ ಕಳೆಯುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿ ಜೊತೆಗೆ ಗ್ರಂಥಾಲಯಗಳ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಓದುಗರ ಸಂಖ್ಯೆ ಹೆಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಳವಳ್ಳಿಯಲ್ಲಿ ನೂತನ ಗ್ರಂಥಾಲಯ ನಿರ್ಮಿಸಲಾಗಿದೆ. ಶ್ರೀರಂಗಪಟ್ಟಣ ಹಾಗೂ ಕೆ.ಆರ್. ಪೇಟೆ ಗಳಲ್ಲಿ ನೂತನ ಗ್ರಂಥಾಲಯ ಸ್ಥಾಪನೆಗೆ ಅನುಮೋದನೆ ದೊರೆತಿದ್ದು ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಂಡಿದೆ ಎಂದು ತಿಳಿಸಿದರು.</p>.<p>‘ಮಾಸಿಕ ಉತ್ತಮ ಓದುಗ ಅಭಿಯಾನ’ ಮಾಡಿ ಗ್ರಂಥಾಲಯಗಳಲ್ಲಿ ಕಲಿತು ಸಾಧನೆ ಮಾಡಿದವರನ್ನು ಕರೆಸಿ ಸನ್ಮಾನ ಮಾಡಿ ಹಾಗೂ ಮಾಸಿಕವಾಗಿ ಗ್ರಂಥಾಲಯದಲ್ಲಿ ಹೆಚ್ಚು ಸಮಯ ಕಳೆದು ವ್ಯಾಸಂಗ ಮಾಡುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುವ ಮೂಲಕ ಓದುಗರನ್ನು ಉತ್ತೇಜಿಸಿ ಎಂದು ಹೇಳಿದರು.</p>.<p>ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್ ಹಾಗೂ ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕ ಕೃಷ್ಣಮೂರ್ತಿ, ಪ್ರಾಧಿಕಾರದ ಸದಸ್ಯರಾದ ಚಂದನ್, ತೈಲೂರು ವೆಂಕಟಕೃಷ್ಣ, ಚಂದ್ರು, ಎಸ್.ಎಸ್ ದಯಾನಂದ, ಲಿಂಗರಾಜುಮೂರ್ತಿ ಎನ್, ಜಿ.ಕೆ ಮಂಜೇಗೌಡ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಸಮರ್ಪಕವಾಗಿ ಓದಿ ಸದುಪಯೋಗ ಪಡಿಸಿಕೊಳ್ಳುವವರು ನಿಜವಾಗಿಯೂ ಸಾಧಕರು’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ 2025-26ನೇ ಸಾಲಿನ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 70ನೇ ಆಯವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲ ಗ್ರಂಥಾಲಯಗಳು ಸೇರಿ ಒಟ್ಟು 1.88 ಲಕ್ಷ ಪುಸ್ತಕಗಳಿವೆ ಎಂದು ತಿಳಿಸಿದರು.</p>.<p>ಎಲ್ಲ ಗ್ರಂಥಾಲಯಗಳಲ್ಲಿ 14 ಲಕ್ಷ ಜನರು ಡಿಜಿಟಲ್ ಸದಸ್ಯತ್ವ ಕಾರ್ಡ್ ಹೊಂದಿದ್ದರೆ ಹಾಗೂ 53 ಸಾವಿರ ಜನರು ಮ್ಯಾನುವಲ್ ಗ್ರಂಥಾಲಯ ಕಾರ್ಡುಗಳನ್ನು ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಗ್ರಂಥಾಲಯಗಳಿಗೆ ಓದಲು ಬರುವವರಿಗೆ ಪ್ರೋತ್ಸಾಹ ನೀಡುವ ಕಾರ್ಯವಾಗಬೇಕಿದೆ. ಗ್ರಂಥಾಲಯಗಳಲ್ಲಿ ಹೆಚ್ಚಿನ ಸಮಯ ಕಳೆಯುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿ ಜೊತೆಗೆ ಗ್ರಂಥಾಲಯಗಳ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಓದುಗರ ಸಂಖ್ಯೆ ಹೆಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಳವಳ್ಳಿಯಲ್ಲಿ ನೂತನ ಗ್ರಂಥಾಲಯ ನಿರ್ಮಿಸಲಾಗಿದೆ. ಶ್ರೀರಂಗಪಟ್ಟಣ ಹಾಗೂ ಕೆ.ಆರ್. ಪೇಟೆ ಗಳಲ್ಲಿ ನೂತನ ಗ್ರಂಥಾಲಯ ಸ್ಥಾಪನೆಗೆ ಅನುಮೋದನೆ ದೊರೆತಿದ್ದು ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಂಡಿದೆ ಎಂದು ತಿಳಿಸಿದರು.</p>.<p>‘ಮಾಸಿಕ ಉತ್ತಮ ಓದುಗ ಅಭಿಯಾನ’ ಮಾಡಿ ಗ್ರಂಥಾಲಯಗಳಲ್ಲಿ ಕಲಿತು ಸಾಧನೆ ಮಾಡಿದವರನ್ನು ಕರೆಸಿ ಸನ್ಮಾನ ಮಾಡಿ ಹಾಗೂ ಮಾಸಿಕವಾಗಿ ಗ್ರಂಥಾಲಯದಲ್ಲಿ ಹೆಚ್ಚು ಸಮಯ ಕಳೆದು ವ್ಯಾಸಂಗ ಮಾಡುವವರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡುವ ಮೂಲಕ ಓದುಗರನ್ನು ಉತ್ತೇಜಿಸಿ ಎಂದು ಹೇಳಿದರು.</p>.<p>ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್ ಹಾಗೂ ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕ ಕೃಷ್ಣಮೂರ್ತಿ, ಪ್ರಾಧಿಕಾರದ ಸದಸ್ಯರಾದ ಚಂದನ್, ತೈಲೂರು ವೆಂಕಟಕೃಷ್ಣ, ಚಂದ್ರು, ಎಸ್.ಎಸ್ ದಯಾನಂದ, ಲಿಂಗರಾಜುಮೂರ್ತಿ ಎನ್, ಜಿ.ಕೆ ಮಂಜೇಗೌಡ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>