<p><strong>ಕೆ.ಆರ್.ಪೇಟೆ:</strong> ‘ತಾಲ್ಲೂಕಿನ ಸಹಕಾರ ಸಂಸ್ಥೆಯಾದ ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಅವರು ಕೊಟ್ಟ ಮಾತಿನಂತೆ ಅಧಿಕಾರ ಬಿಟ್ಟುಕೊಡಬೇಕು’ ಎಂದು ರಾಜ್ಯ ಮಾರಾಟ ಮಹಾಮಂಡಳಿಯ ನಿರ್ದೇಶಕ ಶೀಳನೆರೆ ಮೋಹನ್ ಒತ್ತಾಯಿಸಿದ್ದಾರೆ.</p>.<p>‘ಪಕ್ಷದ ಹಿರಿಯ ನಾಯಕರಾಗಿದ್ದ ಬಿ.ಎಲ್.ದೇವರಾಜು ಕಳೆದ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಬೆಂಬಲದಿಂದ ಗೆದ್ದು ಅಧ್ಯಕ್ಷರಾಗಿದ್ದರು. ಅಧ್ಯಕ್ಷರಾಗುವಾಗ ಮೊದಲ ಒಂದು ಅವಧಿಗೆ ಒಡಂಬಡಿಕೆಯಂತೆ ಅಧ್ಯಕ್ಷರಾಗಿದ್ದು, ಈಗ ಅವರ ಅವಧಿ ಮುಗಿದಿದೆ. ಒಪ್ಪಂದದಂತೆ ಅವರು ರಾಜೀನಾಮೆ ನೀಡಬೇಕಿತ್ತು’ ಎಂದು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಜೆಡಿಎಸ್ ಪಕ್ಷ ತೊರೆದು ಕಳೆದ ವಿದಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಿ ಆ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೂ ನಾವು ಮುಂದೆ ಒಪ್ಪಂದದಂತೆ ರಾಜೀನಾಮೆ ನೀಡುತ್ತಾರೆಂದು ಭಾವಿಸಿ ಸುಮ್ಮನಿದ್ದೆವು. ಆದರೆ ಈವರೆಗೂ ಅವರು ರಾಜೀನಾಮೆ ನೀಡಿಲ್ಲ, ರಾಜೀನಾಮೆ ಪ್ರಸ್ತಾಪ ಮಾಡಿದರೆ ಅವಿಶ್ವಾಸ ಮಂಡಿಸಿ ಕೆಳಗಿಳಿಸಿ ಎಂದು ಹೇಳಿಕೆ ಕೊಟ್ಟಿದ್ದಾರೆ. ಈ ಮಾತು ದೇವರಾಜು ಅವರಂತಹ ಹಿರಿಯ ರಾಜಕಾರಣಿಗಳಿಗೆ ಶೋಭೆ ತರುವುದಿಲ್ಲ. ಸಹಕಾರ ಕ್ಷೇತ್ರದಲ್ಲಿ ದ್ವೇಷ ರಾಜಕಾರಣಕ್ಕೆ ಆದ್ಯತೆ ನೀಡದೆ ಕೊಟ್ಟ ಮಾತಿನಂತೆ ಅವರು ರಾಜೀನಾಮೆ ನೀಡಬೇಕು. ಸಹಕಾರ ಕ್ಷೇತ್ರದ ಬೆಳವಣಿಗೆಗೆ ನೆರವಾಗಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಜೆಡಿಎಸ್ ಘಟಕದ ತಾಲ್ಲೂಕು ಅಧ್ಯಕ್ಷ ಎ.ಎನ್ ಜಾನಕೀರಾಂ, ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ ಹರೀಶ್, ಟಿಎಪಿಸಿಎಂಎಸ್ ನಿರ್ದೇಶಕರಾದ ನಾಗರಾಜು, ಮಂಜುನಾಥ್, ತೆರ್ನೇನಹಳ್ಳಿ ಬಲದೇವ್, ಸುಕನ್ಯಾ ಲಕ್ಷ್ಮಣ್, ರುಕ್ಮಿಣಿ, ರಾಮಕೃಷ್ಣೇಗೌಡ, ಎಸ್.ಜಿ ಮೋಹನ್, ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ‘ತಾಲ್ಲೂಕಿನ ಸಹಕಾರ ಸಂಸ್ಥೆಯಾದ ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಅವರು ಕೊಟ್ಟ ಮಾತಿನಂತೆ ಅಧಿಕಾರ ಬಿಟ್ಟುಕೊಡಬೇಕು’ ಎಂದು ರಾಜ್ಯ ಮಾರಾಟ ಮಹಾಮಂಡಳಿಯ ನಿರ್ದೇಶಕ ಶೀಳನೆರೆ ಮೋಹನ್ ಒತ್ತಾಯಿಸಿದ್ದಾರೆ.</p>.<p>‘ಪಕ್ಷದ ಹಿರಿಯ ನಾಯಕರಾಗಿದ್ದ ಬಿ.ಎಲ್.ದೇವರಾಜು ಕಳೆದ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಬೆಂಬಲದಿಂದ ಗೆದ್ದು ಅಧ್ಯಕ್ಷರಾಗಿದ್ದರು. ಅಧ್ಯಕ್ಷರಾಗುವಾಗ ಮೊದಲ ಒಂದು ಅವಧಿಗೆ ಒಡಂಬಡಿಕೆಯಂತೆ ಅಧ್ಯಕ್ಷರಾಗಿದ್ದು, ಈಗ ಅವರ ಅವಧಿ ಮುಗಿದಿದೆ. ಒಪ್ಪಂದದಂತೆ ಅವರು ರಾಜೀನಾಮೆ ನೀಡಬೇಕಿತ್ತು’ ಎಂದು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಜೆಡಿಎಸ್ ಪಕ್ಷ ತೊರೆದು ಕಳೆದ ವಿದಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಿ ಆ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೂ ನಾವು ಮುಂದೆ ಒಪ್ಪಂದದಂತೆ ರಾಜೀನಾಮೆ ನೀಡುತ್ತಾರೆಂದು ಭಾವಿಸಿ ಸುಮ್ಮನಿದ್ದೆವು. ಆದರೆ ಈವರೆಗೂ ಅವರು ರಾಜೀನಾಮೆ ನೀಡಿಲ್ಲ, ರಾಜೀನಾಮೆ ಪ್ರಸ್ತಾಪ ಮಾಡಿದರೆ ಅವಿಶ್ವಾಸ ಮಂಡಿಸಿ ಕೆಳಗಿಳಿಸಿ ಎಂದು ಹೇಳಿಕೆ ಕೊಟ್ಟಿದ್ದಾರೆ. ಈ ಮಾತು ದೇವರಾಜು ಅವರಂತಹ ಹಿರಿಯ ರಾಜಕಾರಣಿಗಳಿಗೆ ಶೋಭೆ ತರುವುದಿಲ್ಲ. ಸಹಕಾರ ಕ್ಷೇತ್ರದಲ್ಲಿ ದ್ವೇಷ ರಾಜಕಾರಣಕ್ಕೆ ಆದ್ಯತೆ ನೀಡದೆ ಕೊಟ್ಟ ಮಾತಿನಂತೆ ಅವರು ರಾಜೀನಾಮೆ ನೀಡಬೇಕು. ಸಹಕಾರ ಕ್ಷೇತ್ರದ ಬೆಳವಣಿಗೆಗೆ ನೆರವಾಗಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ಜೆಡಿಎಸ್ ಘಟಕದ ತಾಲ್ಲೂಕು ಅಧ್ಯಕ್ಷ ಎ.ಎನ್ ಜಾನಕೀರಾಂ, ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ ಹರೀಶ್, ಟಿಎಪಿಸಿಎಂಎಸ್ ನಿರ್ದೇಶಕರಾದ ನಾಗರಾಜು, ಮಂಜುನಾಥ್, ತೆರ್ನೇನಹಳ್ಳಿ ಬಲದೇವ್, ಸುಕನ್ಯಾ ಲಕ್ಷ್ಮಣ್, ರುಕ್ಮಿಣಿ, ರಾಮಕೃಷ್ಣೇಗೌಡ, ಎಸ್.ಜಿ ಮೋಹನ್, ದಿನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>