<p><strong>ಮದ್ದೂರು</strong>: ಜಿಲ್ಲಾಧಿಕಾರಿ ಕುಮಾರ ಅವರು ಗುರುವಾರ ಪಟ್ಟಣದ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಈ ವೇಳೆ ಸಾರ್ವಜನಿಕರು ಆರ್ಟಿಸಿ ತಿದ್ದುಪಡಿ, ಪೋಡಿ ತಿದ್ದುಪಡಿ, ಜನನ- ಮರಣ ಪ್ರಮಾಣ ಪತ್ರ ಕುರಿತು ಅರ್ಜಿಗಳನ್ನು ಖುದ್ದು ಸ್ವೀಕರಿಸಿ ಸಾರ್ವಜನಿಕರ ಕುಂದು–ಕೊರತೆಗಳನ್ನು ಆಲಿಸಿದರು.</p>.<p>‘ಅರ್ಜಿಗಳನ್ನು ತಹಶೀಲ್ದಾರ್, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೀಡಿ ನಿಯಮಾನುಸಾರ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸರ್ಕಾರಿ ಕೆಲಸಗಳಿಗೆ ತಾಲ್ಲೂಕು ಕಚೇರಿಗೆ ವಿನಾಕಾರಣ ಅಲೆದಾಡಿಸಬಾರದು, ಒಂದು ವೇಳೆ ಈ ಬಗ್ಗೆ ದೂರುಗಳು ಕಂಡುಬಂದಲ್ಲಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ವಿವಿಧ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿಯೊಡನೆ ಸಭೆ ನಡೆಸಿ ಕಡತಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದರು. ನಿಗದಿಪಡಿಸಿರುವ ಸಮಯಕ್ಕೆ ಎಲ್ಲಾ ಅರ್ಜಿಗಳು ವಿಲೇವಾರಿ ಮಾಡಬೇಕು ಹಾಗೂ ಸಿಬ್ಬಂದಿ ಸರಿಯಾದ ಸಮಯಕ್ಕೆ ಹಾಜರಾಗಬೇಕು’ ಎಂದು ತಾಕೀತು ಮಾಡಿದರು.</p>.<p>ಆರ್.ಟಿ.ಸಿ ವಿತರಣಾ ಕೇಂದ್ರ ಸೇರಿದಂತೆ ಸರ್ವೇ ಶಾಖೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ ನಿಯಮಿತ ಕಾಲಾವಧಿಯಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಭೂದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.</p>.<p>ಜನನ– ಮರಣ ಶಾಖೆಯಲ್ಲಿ ನಿಯಮಿತ ಕಾಲಮಿತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಗ್ರೇಡ್– 2 ತಹಶೀಲ್ದಾರ್ ಸೋಮಶೇಖರ್ ಅವರಿಗೆ ಸೂಚಿಸಿದ ಅವರು, ದಾಖಲೆ ಕೊಠಡಿಯಲ್ಲಿ ತುರ್ತಾಗಿ ನಕಲು ಒದಗಿಸಲು ಸೂಚಿಸಿದರು. ಇತ್ತೀಚೆಗೆ ನಡೆದ ತಾಲೂಕು ಕಚೇರಿ ಕಟ್ಟಡದ ದುರಸ್ತಿ ಕೆಲಸದ ಬಗ್ಗೆ ಪರಿಶೀಲನೆಯನ್ನೂ ನಡೆಸಿದರು.</p>.<p>ಗ್ರೇಡ್ 2 ತಹಶೀಲ್ದಾರ್ ಸೋಮಶೇಖರಯ್ಯ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ಜಿಲ್ಲಾಧಿಕಾರಿ ಕುಮಾರ ಅವರು ಗುರುವಾರ ಪಟ್ಟಣದ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.</p>.<p>ಈ ವೇಳೆ ಸಾರ್ವಜನಿಕರು ಆರ್ಟಿಸಿ ತಿದ್ದುಪಡಿ, ಪೋಡಿ ತಿದ್ದುಪಡಿ, ಜನನ- ಮರಣ ಪ್ರಮಾಣ ಪತ್ರ ಕುರಿತು ಅರ್ಜಿಗಳನ್ನು ಖುದ್ದು ಸ್ವೀಕರಿಸಿ ಸಾರ್ವಜನಿಕರ ಕುಂದು–ಕೊರತೆಗಳನ್ನು ಆಲಿಸಿದರು.</p>.<p>‘ಅರ್ಜಿಗಳನ್ನು ತಹಶೀಲ್ದಾರ್, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೀಡಿ ನಿಯಮಾನುಸಾರ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸರ್ಕಾರಿ ಕೆಲಸಗಳಿಗೆ ತಾಲ್ಲೂಕು ಕಚೇರಿಗೆ ವಿನಾಕಾರಣ ಅಲೆದಾಡಿಸಬಾರದು, ಒಂದು ವೇಳೆ ಈ ಬಗ್ಗೆ ದೂರುಗಳು ಕಂಡುಬಂದಲ್ಲಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ವಿವಿಧ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿಯೊಡನೆ ಸಭೆ ನಡೆಸಿ ಕಡತಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದರು. ನಿಗದಿಪಡಿಸಿರುವ ಸಮಯಕ್ಕೆ ಎಲ್ಲಾ ಅರ್ಜಿಗಳು ವಿಲೇವಾರಿ ಮಾಡಬೇಕು ಹಾಗೂ ಸಿಬ್ಬಂದಿ ಸರಿಯಾದ ಸಮಯಕ್ಕೆ ಹಾಜರಾಗಬೇಕು’ ಎಂದು ತಾಕೀತು ಮಾಡಿದರು.</p>.<p>ಆರ್.ಟಿ.ಸಿ ವಿತರಣಾ ಕೇಂದ್ರ ಸೇರಿದಂತೆ ಸರ್ವೇ ಶಾಖೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳಿಗೆ ನಿಯಮಿತ ಕಾಲಾವಧಿಯಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಭೂದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.</p>.<p>ಜನನ– ಮರಣ ಶಾಖೆಯಲ್ಲಿ ನಿಯಮಿತ ಕಾಲಮಿತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಗ್ರೇಡ್– 2 ತಹಶೀಲ್ದಾರ್ ಸೋಮಶೇಖರ್ ಅವರಿಗೆ ಸೂಚಿಸಿದ ಅವರು, ದಾಖಲೆ ಕೊಠಡಿಯಲ್ಲಿ ತುರ್ತಾಗಿ ನಕಲು ಒದಗಿಸಲು ಸೂಚಿಸಿದರು. ಇತ್ತೀಚೆಗೆ ನಡೆದ ತಾಲೂಕು ಕಚೇರಿ ಕಟ್ಟಡದ ದುರಸ್ತಿ ಕೆಲಸದ ಬಗ್ಗೆ ಪರಿಶೀಲನೆಯನ್ನೂ ನಡೆಸಿದರು.</p>.<p>ಗ್ರೇಡ್ 2 ತಹಶೀಲ್ದಾರ್ ಸೋಮಶೇಖರಯ್ಯ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>