ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರಕ್ಕೆ ಕೊಟ್ಟ ಹಣ ವಾಪಸ್‌ ಕೊಡಿ: ಡಿ.ಕೆ.ಶಿವಕುಮಾರ್‌ ಒತ್ತಾಯ

Last Updated 15 ಜೂನ್ 2021, 12:56 IST
ಅಕ್ಷರ ಗಾತ್ರ

ಮಂಡ್ಯ: ‘ರಾಮಮಂದಿರ ನಿರ್ಮಾಣಕ್ಕೆ ಜನರು ನೀಡಿದ ಹಣ ದುರ್ಬಳಕೆ ಮಾಡಿಕೊಳ್ಳುವ ಮೂಲಕ ದೇಶಕ್ಕೆ, ನಮ್ಮ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ. ಜನರು ಕೊಟ್ಟ ಹಣವನ್ನು ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಕೂಡಲೇ ವಾಪಸ್‌ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಂಗಳವಾರ ಒತ್ತಾಯಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ದೇಶದ ಎಲ್ಲಾ ವರ್ಗದ ಜನರು ₹ 1, ₹ 10ರಿಂದ ಲಕ್ಷಾಂತರ, ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ದೇವಾಲಯ ನಿರ್ಮಾಣವಾಗುತ್ತದೆ ಎಂಬ ಉದ್ದೇಶದಿಂದ ದೇಣಿಗೆ ಕೊಟ್ಟಿದ್ದಾರೆ. ರಾಮಜನ್ಮ ಭೂಮಿಯಲ್ಲಿ ವಹಿವಾಟು ನಡೆಸಲು ಜನರು ಹಣ ಕೊಟ್ಟಿಲ್ಲ. ಅವ್ಯಹಾರದ ಮೂಲಕ ಜನರ ನಂಬಿಕೆ, ದೇವರಿಗೆ ಅವಮಾನ ಮಾಡಲಾಗಿದೆ’ ಎಂದು ಆರೋಪಿಸಿದರು.

‘ಕಳೊಂದು ವರ್ಷದಿಂದ 51 ಬಾರಿ ಪೆಟ್ರೋಲ್‌ ಬೆಲೆ ಹೆಚ್ಚಳ ಮಾಡಲಾಗಿದೆ. ತಿಂಗಳಿಂದೀಚೆಗೆ 17 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಅಮೆರಿಕದಂತಹ ದೇಶದಲ್ಲೂ ಪೆಟ್ರೋಲ್‌ ಬೆಲೆ ಕಡಿಮೆ ಇದೆ. ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳದಲ್ಲೂ ಕಡಿಮೆ ಬೆಲೆ ಇದೆ. ಆದರೆ ನಮ್ಮ ದೇಶದಲ್ಲಿ ಪೆಟ್ರೋಲ್‌ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಹಣ ಲೂಟಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಬಡವರ ಜೇಬನ್ನು ಪಿಕ್‌ ಪ್ಯಾಕೇಟ್‌ ಮಾಡುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT