<p>ಮಂಡ್ಯ: ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜನರತ್ತ ಹಣ ಎಸೆದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಡಿ.ಕೆ.ಶಿವಕುಮಾರ್ ಪ್ರಜಾಧ್ವನಿ ಯಾತ್ರೆ ನಡೆಸಿದರು. ತಾಲ್ಲೂಕಿನ ಕ್ಯಾತುಂಗೆರೆಯಿಂದ ರೋಡ್ ಶೋ ಆರಂಭವಾಯಿತು. ಯಾತ್ರೆ ಬೇವಿನಹಳ್ಳಿ ಗ್ರಾಮ ತಲುಪಿದಾಗ ತಾವು ಬರುತ್ತಿದ್ದ ವಾಹನದ ಬಳಿ ಬಂದ ಕೆಲವು ವಾದ್ಯ ಕಲಾವಿದರು ಹಣ ನೀಡುವಂತೆ ಒತ್ತಾಯಿಸಿದರು.</p>.<p>ಆಗ ಡಿಕೆಶಿ ತಮ್ಮ ಜೇಬಿನಿಂದ ₹ 500 ನೋಟುಗಳನ್ನು ತೆಗೆದು ನೀಡಲು ಯತ್ನಿಸಿದರು, ಆದರೆ ಅವರು ವಾಹನದ ಮೇಲಿದ್ದ ಕಾರಣ ಕಲಾವಿದರು ಎಟುಕಲಿಲ್ಲ. ಆಗ ಡಿಕೆಶಿ ನೋಟಗಳನ್ನುಕಲಾವಿದರೂ ಇದ್ದ ಜನರತ್ತ ಎಸೆದರು.</p>.<p>ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚುನಾವಣಾಧಿಕಾರಿಗಳು ಡಿಕೆಶಿ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಬುಧವಾರ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ವಿಡಿಯೊ ಹೆಚ್ಚು ವೈರಲ್ ಆಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜನರತ್ತ ಹಣ ಎಸೆದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.<p>ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಡಿ.ಕೆ.ಶಿವಕುಮಾರ್ ಪ್ರಜಾಧ್ವನಿ ಯಾತ್ರೆ ನಡೆಸಿದರು. ತಾಲ್ಲೂಕಿನ ಕ್ಯಾತುಂಗೆರೆಯಿಂದ ರೋಡ್ ಶೋ ಆರಂಭವಾಯಿತು. ಯಾತ್ರೆ ಬೇವಿನಹಳ್ಳಿ ಗ್ರಾಮ ತಲುಪಿದಾಗ ತಾವು ಬರುತ್ತಿದ್ದ ವಾಹನದ ಬಳಿ ಬಂದ ಕೆಲವು ವಾದ್ಯ ಕಲಾವಿದರು ಹಣ ನೀಡುವಂತೆ ಒತ್ತಾಯಿಸಿದರು.</p>.<p>ಆಗ ಡಿಕೆಶಿ ತಮ್ಮ ಜೇಬಿನಿಂದ ₹ 500 ನೋಟುಗಳನ್ನು ತೆಗೆದು ನೀಡಲು ಯತ್ನಿಸಿದರು, ಆದರೆ ಅವರು ವಾಹನದ ಮೇಲಿದ್ದ ಕಾರಣ ಕಲಾವಿದರು ಎಟುಕಲಿಲ್ಲ. ಆಗ ಡಿಕೆಶಿ ನೋಟಗಳನ್ನುಕಲಾವಿದರೂ ಇದ್ದ ಜನರತ್ತ ಎಸೆದರು.</p>.<p>ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚುನಾವಣಾಧಿಕಾರಿಗಳು ಡಿಕೆಶಿ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಬುಧವಾರ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ವಿಡಿಯೊ ಹೆಚ್ಚು ವೈರಲ್ ಆಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>