ಸಂತೇಬಾಚಹಳ್ಳಿ: ಚುನಾವಣೆ ಸಂದರ್ಭದಲ್ಲಿ ನಡೆಯುವ ಅಕ್ರಮವನ್ನು ತಡೆಯಬೇಕು ಆದಾಯ ತೆರಿಗೆ ಇಲಾಖೆ, ಇಡಿ ಸಂಸ್ಥೆಗಳು ಕಣ್ಣು ಮುಚ್ಚಿ ಕುಳಿತಿರುವುದು ದುರದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.
ಇಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಕ್ಷೇತ್ರದಲ್ಲೇ ಇದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಎರಡು ಬಾರಿ ಶಾಸಕರಾಗಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ದುಡಿದ ಚಂದ್ರಶೇಖರ್ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಕೆ.ಬಿ.ಚಂದ್ರಶೇಖರ್, ಮಾಜಿ ಸಚಿವ ನರೇಂದ್ರಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರಬಾಬು, ಮನ್ಮುಲ್ ನಿರ್ದೇಶಕ ಡಾಲು ರವಿ ಇದ್ದರು.