<p><strong>ಮಂಡ್ಯ:</strong> ನಗರದಲ್ಲಿ ತನ್ನದೇ ಇತಿಹಾಸ ಹೊಂದಿರುವ ಮೈಷುಗರ್ ಪ್ರೌಢಶಾಲೆಯನ್ನು ಉಚಿತವಾಗಿ ಗುತ್ತಿಗೆ ನೀಡುವ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಮೈಷುಗರ್ ಹೈಸ್ಕೂಲ್ ವೆಲ್ಫೇರ್ ಓಲ್ಡ್ ಸ್ಟೂಡೆಂಟ್ಸ್ ಅಸೋಸಿಯೇಷನ್ ಸದಸ್ಯ ಕೆ. ಬೋರಯ್ಯ ಒತ್ತಾಯಿಸಿದರು.</p>.<p>ಈ ಹಿಂದೆ ನಮ್ಮ ಮೈಷುಗರ್ ಕಂಪನಿ ಮತ್ತು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಮೊದಲಿನಂತೆಯೇ ಶಾಲಾ ನಿರ್ವಹಣೆ ಮಾಡಬೇಕು. ಖಾಸಗಿಯವರಿಗೆ ಗುತ್ತಿಗೆ ನೀಡುವುದು ಬೇಡ ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಸಲಹೆ ನೀಡಿದರು.</p>.<p>ಕಂಪನಿಗೆ ಕಬ್ಬು ಸರಬರಾಜು ಮಾಡುವ ರೈತರ ಬಿಲ್ನಲ್ಲಿ ಪ್ರತಿ ಟನ್ಗೆ ₹4, ಕಂಪನಿಯಿಂದ ₹4 ಸೇರಿ ₹8ರಂತೆ ವಂತಿಕೆ ಹಣದಲ್ಲಿ ಟ್ರಸ್ಟ್ ರಚನೆ ಮಾಡಿ ಶಾಲೆ ನಿರ್ವಹಣೆ ಮಾಡಲಾಗುತ್ತಿದೆ. ಆದರೆ, ಕಾರ್ಖಾನೆ ಕಳೆದ 10 ವರ್ಷಗಳಿಂದ ಸರಿಯಾಗಿ ಕಬ್ಬು ನುರಿಸದೇ ಇರುವುದರಿಂದ ತೊಂದರೆಯಾಗಿದೆ ಎಂದು ಆರೋಪಿಸಿದರು.</p>.<p>ಅಸೋಸಿಯೇಷನ್ನ ಅಧ್ಯಕ್ಷ ಬಿ.ಟಿ.ಜಯರಾಂ, ಕಾರ್ಯದರ್ಶಿ ಕೆ.ಎಂ.ಶಿವಕುಮಾರ್, ಉಪಾಧ್ಯಕ್ಷ ಎಸ್.ಸಿ.ಸತ್ಯನಾರಾಯಣ್ದೇವ್, ಸದಸ್ಯರಾದ ಇಂಡುವಾಳು ಚಂದ್ರಶೇಖರ್, ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನಗರದಲ್ಲಿ ತನ್ನದೇ ಇತಿಹಾಸ ಹೊಂದಿರುವ ಮೈಷುಗರ್ ಪ್ರೌಢಶಾಲೆಯನ್ನು ಉಚಿತವಾಗಿ ಗುತ್ತಿಗೆ ನೀಡುವ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಮೈಷುಗರ್ ಹೈಸ್ಕೂಲ್ ವೆಲ್ಫೇರ್ ಓಲ್ಡ್ ಸ್ಟೂಡೆಂಟ್ಸ್ ಅಸೋಸಿಯೇಷನ್ ಸದಸ್ಯ ಕೆ. ಬೋರಯ್ಯ ಒತ್ತಾಯಿಸಿದರು.</p>.<p>ಈ ಹಿಂದೆ ನಮ್ಮ ಮೈಷುಗರ್ ಕಂಪನಿ ಮತ್ತು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಮೊದಲಿನಂತೆಯೇ ಶಾಲಾ ನಿರ್ವಹಣೆ ಮಾಡಬೇಕು. ಖಾಸಗಿಯವರಿಗೆ ಗುತ್ತಿಗೆ ನೀಡುವುದು ಬೇಡ ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಸಲಹೆ ನೀಡಿದರು.</p>.<p>ಕಂಪನಿಗೆ ಕಬ್ಬು ಸರಬರಾಜು ಮಾಡುವ ರೈತರ ಬಿಲ್ನಲ್ಲಿ ಪ್ರತಿ ಟನ್ಗೆ ₹4, ಕಂಪನಿಯಿಂದ ₹4 ಸೇರಿ ₹8ರಂತೆ ವಂತಿಕೆ ಹಣದಲ್ಲಿ ಟ್ರಸ್ಟ್ ರಚನೆ ಮಾಡಿ ಶಾಲೆ ನಿರ್ವಹಣೆ ಮಾಡಲಾಗುತ್ತಿದೆ. ಆದರೆ, ಕಾರ್ಖಾನೆ ಕಳೆದ 10 ವರ್ಷಗಳಿಂದ ಸರಿಯಾಗಿ ಕಬ್ಬು ನುರಿಸದೇ ಇರುವುದರಿಂದ ತೊಂದರೆಯಾಗಿದೆ ಎಂದು ಆರೋಪಿಸಿದರು.</p>.<p>ಅಸೋಸಿಯೇಷನ್ನ ಅಧ್ಯಕ್ಷ ಬಿ.ಟಿ.ಜಯರಾಂ, ಕಾರ್ಯದರ್ಶಿ ಕೆ.ಎಂ.ಶಿವಕುಮಾರ್, ಉಪಾಧ್ಯಕ್ಷ ಎಸ್.ಸಿ.ಸತ್ಯನಾರಾಯಣ್ದೇವ್, ಸದಸ್ಯರಾದ ಇಂಡುವಾಳು ಚಂದ್ರಶೇಖರ್, ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>