ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಡಾ.ಶಶಿಕಲಾ ಮಾತನಾಡಿ, ‘ಜಿಲ್ಲಾ ವೈದ್ಯಾಧಿಕಾರಿ ಮಂಚೇಗೌಡ ಅವರು ರಾಜಕೀಯ ಒತ್ತಡಕ್ಕೆ ಮಣಿದು ದುರುದ್ದೇಶಪೂರಕವಾಗಿ ಬೆಂಗಳೂರಿನ ವೈದ್ಯಕೀಯ ನಿರ್ದೇಶನಾಲಯಕ್ಕೆ ವರದಿ ಮಾಡಿಕೊಳ್ಳುವಂತೆ ಆದೇಶಿಸಿ ವರ್ಗಾವಣೆ ಮಾಡಿದ್ದು ಖಂಡನೀಯ. ಇಲ್ಲಿನ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞ ಡಾ.ಶಿವಸ್ವಾಮಿ ಅವರು ವಿನಾಕಾರಣ ತಮ್ಮ ಮೇಲೆ ದಲಿತ ಮಹಿಳೆ ಎನ್ನುವ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮಾನಸಿಕವಾಗಿ ಹಿಂಸೆ ನೀಡಿರುವುದಾಗಿ ಆರೋಪಿಸಿದ ಅವರು, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು‘ ಎಂದು ಆಗ್ರಹಿಸಿದ್ದಾರೆ.