ಟಿಎಚ್ಒ ಡಾ.ಜವರೇಗೌಡ ಮಾತನಾಡಿ, ವೈದ್ಯರ ಗೈರು ಹಾಜರಿ ಬಗ್ಗೆ ಇದೀಗ ಮಾಹಿತಿ ಲಭಿಸಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು, ಜಿಲ್ಲಾಧಿಕಾರಿ ಡಾ.ಎಸ್.ಅಶ್ವಥಿ, ಡಿಎಚ್ಒ ಡಾ.ಎಚ್.ಪಿ.ಮಂಚೇಗೌಡ ಅವರಿಗೆ ವರದಿ ಸಲ್ಲಿಸಲಾಗಿದೆ. ಅವರ ಉತ್ತರಕ್ಕಾಗಿ ಕಾಯುತ್ತಿರುವುದಾಗಿ ತಿಳಿಸಿದರು.