ಬಡಾವಣೆಯಲ್ಲಿ ಒಂದು ವಾರದಿಂದ ಬೀದಿನಾಯಿಗಳ ಹಿಂಡು ಅಡ್ಡಾಡುತ್ತಿವೆ. ಗುರುವಾರ ಬೆಳಿಗ್ಗೆ ಅಂಗಡಿಗೆ ಹೋಗುವಾಗ ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ಚುಚ್ಚುಮದ್ದು ಸಿಗದೆ ಖಾಸಗಿ ಆಸ್ಪತ್ರೆಯಲ್ಲಿ ₹ 350 ನೀಡಿ ಚುಚ್ಚುಮದ್ದು ಹಾಕಿಸಿಕೊಂಡಿದ್ದೇನೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ರಸ್ತೆಯಲ್ಲಿ ಹೋಗುವುದೇ ಕಷ್ಟವಾಗಿದೆ. ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಗೊತ್ತಿದ್ದರೂ ಜಾಣಮೌನ ವಹಿಸಿದ್ದಾರೆ ಎಂದು ನಾಯಿ ಕಡಿತಕ್ಕೊಳಗಾದ ಅಜರ್ ಪಾಷಾ ದೂರಿದರು.