‘ಅಂಗನವಾಡಿ, ಶಾಲಾ- ಕಾಲೇಜು ಮಕ್ಕಳ ಪೋಷಕರ ಲಸಿಕಾಕರಣ ಸಂಬಂಧ ಶಾಲಾ ಮುಖ್ಯ ಶಿಕ್ಷಕರು, ಬಿಇಒ, ಸಿಡಿಪಿಒ, ಡಿಡಿಪಿಯು ಕ್ರಮ ವಹಿಸಬೇಕು. ಅರ್ಹ ಫಲಾನುಭವಿಗಳಿಗೆ ಬಾಕಿ ಉಳಿದಿರುವ ಲಸಿಕೆ ನೀಡಲು ಆಶಾ ಕಾರ್ಯಕರ್ತೆಯರು, ಶಿಕ್ಷಕರು ಜಾಗೃತಿ ಮೂಡಿಸಿ ಕಡ್ಡಾಯವಾಗಿ ಲಸಿಕೆ ನೀಡಬೇಕು. ತಾಲ್ಲೂಕಿನಲ್ಲಿ ಲಸಿಕೀಕರಣವನ್ನು ಹೆಚ್ಚು ಮಾಡಲು ತಹಶೀಲ್ದಾರ್, ಆರೋಗ್ಯಾಧಿಕಾರಿ ನಗರದಲ್ಲಿ ನಗರಸಭೆ, ಪುರಸಭೆ ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಸೂಚಿಸಿದರು.