‘ಮೈಸೂರಿನ ಎನ್.ಆರ್. ಮೊಹಲ್ಲಾದ ಕುಮಾರಸ್ವಾಮಿ ಅವರ ಪುತ್ರ ರಾಘವೇಂದ್ರ ಎಂಬುವವರಿಗೆ 2 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ವಿವಾಹದ ವೇಳೆ 150 ಗ್ರಾಂ ಚಿನ್ನ, ₹5 ಲಕ್ಷ ವರದಕ್ಷಿಣೆಯಾಗಿ ನೀಡಲಾಗಿತ್ತು. ಆರಂಭದಲ್ಲಿ ಚೆನ್ನಾಗಿದ್ದರು. ನಂತರ ತವರು ಮನೆಯಿಂದ ಮತ್ತಷ್ಟು ವರದಕ್ಷಿಣೆ ತರುವಂತೆ ಆಗಿಂದಾಗ್ಗೆ ಹಿಂಸೆ ನೀಡಲು ಆರಂಭಿಸಿದ್ದರು. ನಿತ್ಯ ಗಲಾಟೆ, ಬೆದರಿಕೆ ಹಾಕುತ್ತಿದ್ದರು. ಈ ಕುರಿತು ಸಾಕಷ್ಟು ರಾಜಿ, ಪಂಚಾಯಿತಿಗಳು ನಡೆದವು. ಯಾವುದೂ ಪ್ರಯೋಜನವಾಗದೆ, ಹಿಂಸೆ ತಾಳಲಾರದೆ ವರ್ಷದ ಹಿಂದೆ ತವರು ಮನೆಗೆ ಮನೆಗೆ ಕರೆದುಕೊಂಡು ಬಂದಿದ್ದಾಗಿ ಮಂಜುಳಾ ಅವರು ದೂರಿನಲ್ಲಿ ತಿಳಿಸಿದ್ದಾರೆ.