<p><strong>ಮಂಡ್ಯ</strong>: ಜಿಲ್ಲೆಯ 3 ತಾಲ್ಲೂಕುಗಳ 791 ಗ್ರಾಮಗಳು ಮತ್ತು ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ ಹಾಗೂ ನಬಾರ್ಡ್ ನೆರವಿನ ಯೋಜನೆಗೆ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ದಶಕಗಳ ಕನಸು ಕೈಗೂಡಿದ್ದು ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಆರಂಭಗೊಳ್ಳಲಿದೆ.</p>.<p>₹ 690.36 ಕೋಟಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು ಮೂರು ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಕೆಆrffಎಸ್ ಜಲಾಶಯದಿಂದ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು 2023ರೊಳಗೆ ಕೆ.ಆರ್.ಪೇಟೆ, ಪಾಂಡವಪುರ, ನಾಗಮಂಗಲ ತಾಲ್ಲೂಕುಗಳಿಗೆ ಶಾಶ್ವತವಾಗಿ ಕುಡಿಯುವ ನೀರು ಪೂರೈಕೆಯಾಗಲಿದೆ.</p>.<p>ಮೂರೂ ತಾಲ್ಲೂಕುಗಳ ಹಳ್ಳಿಗಳಿಗೆ ಪ್ರತಿ ಮನೆಮನೆಗೆ ನಲ್ಲಿ ನೀರು ಪೂರೈಕೆ, ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರ, ಕೆ.ಆರ್.ಪೇಟೆ ತಾಲ್ಲೂಕಿನ 5 ವಸತಿ ಶಾಲೆಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಯೋಜನೆ ಜಾರಿ ಸನ್ನಿಹಿತವಾಗಿದೆ.</p>.<p>ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶಕ್ಕೆ 55 ಎಲ್ಪಿಸಿಡಿ ( ಲೀಟರ್ ಪರ್ ಕ್ಯಾಪಿಟ ಪರ್ ಡೇ), ಪಟ್ಟಣ ಪ್ರದೇಶಕ್ಕೆ 135 ಎಲ್ಪಿಸಿಡಿ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಮೂರು ತಿಂಗಳೊಳಗಾಗಿ ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. 30 ತಿಂಗಳೊಳಗಾಗಿ ಯೋಜನೆಯನ್ನು ಪೂರ್ಣಗೊಳಿಸಿ, ಯೋಜನೆಯ ರೂಪು ರೇಷೆಯಂತೆ ಯೋಜನೆ ಜಾರಿಯ ಉದ್ದೇಶ ಹೊಂದಲಾಗಿದೆ.</p>.<p>ಕೆ.ಆರ್.ಪೇಟೆ ತಾಲೂಕಿನ 310 ಹಳ್ಳಿಗಳು, ನಾಗಮಂಗಲ ತಾಲೂಕಿನ 391 ಹಳ್ಳಿಗಳು, ಬೆಳ್ಳೂರು ಪಟ್ಟಣ ಪಂಚಾಯತಿ, ಪಾಂಡವಪುರ ತಾಲೂಕಿನ 96 ಹಳ್ಳಿಗಳು ಸೇರಿ ಒಟ್ಟು 791 ಕ್ಕು ಹೆಚ್ಚು ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತಲುಪಲಿದೆ.</p>.<p>ಈ ಯೋಜನೆಯಿಂದ ಒಟ್ಟು 4,16,568 ಜನರಿಗೆ ಈ ಯೋಜನೆ ಲಾಭವಾgಲಿದೆ. ಕೆ.ಆರ್. ಪೇಟೆ ತಾಲ್ಲೂಕಿನ 1,95,112 ಜನರಿಗೆ, ನಾಗಮಂಗಲ ತಾಲ್ಲೂಕಿನ 1,31,221 ಜನರಿಗೆ ಹಾಗೂ ಪಾಂಡವಪುರದ 90,235 ಜನರಿಗೆ ಕುಡಿಯುವ ನೀರು ದೊರೆಯಲಿದೆ.</p>.<p><strong>ಸಂತಸ ವ್ಯಕ್ತಪಡಿಸಿದ ಉಸ್ತುವಾರಿ ಸಚಿವ</strong>: ‘ಅಭಿವೃದ್ಧಿಯ ವಿಚಾರದಲ್ಲಿ ನಾನು ಯಾವುದೇ ರಾಜಕಾರಣ ಮಾಡುವುದಿಲ್ಲ, ಚುನಾವಣೆಯಲ್ಲಿ ಮಾತ್ರ ರಾಜಕೀಯ. ಪಕ್ಷ ಭೇದ ಮರೆತು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದೇ ನನ್ನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ಸಾಕಷ್ಟು ಶ್ರಮಿಸಿದ್ದೇನೆ. ಯೋಜನೆಗೆ ಅನುಮೋದನೆ ದೊರೆತಿರುವುದು ಸಂತಸ ತಂದಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಸಂತಸ ವ್ಯಕ್ತಪಡಿಸಿದ್ದಾರೆ.</p>.<p>‘ಈ ಯೋಜನೆಗೆ ಮಂಜೂರಾತಿ ದೊರಕಿಸಿಕೊಡಲು ಸಹಕರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸಚಿವ ಸಂಪುಟದ ಸಹುದ್ಯೋಗಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.</p>.<p><strong>ಯೋಜನೆ ಅಂಕಿ ಅಂಶ</strong></p>.<p>ಗ್ರಾಮೀಣ ವಸತಿ 797<br />ಪಟ್ಟಣ 04<br />ಜನಸಂಖ್ಯೆ 4.93 ಲಕ್ಷ<br />ಯೋಜನಾ ವೆಚ್ಚ ₹ 690.36 ಕೋಟಿ<br />ಕೇಂದ್ರದ ಪಾಲು ₹ 230.23 ಕೋಟಿ<br />ನಬಾರ್ಡ್ ಸಹಾಯ ₹ 297.79<br />ಯೋಜನಾ ಅವಧಿ 30 ತಿಂಗಳು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಜಿಲ್ಲೆಯ 3 ತಾಲ್ಲೂಕುಗಳ 791 ಗ್ರಾಮಗಳು ಮತ್ತು ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ ಹಾಗೂ ನಬಾರ್ಡ್ ನೆರವಿನ ಯೋಜನೆಗೆ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ದಶಕಗಳ ಕನಸು ಕೈಗೂಡಿದ್ದು ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಆರಂಭಗೊಳ್ಳಲಿದೆ.</p>.<p>₹ 690.36 ಕೋಟಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು ಮೂರು ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಕೆಆrffಎಸ್ ಜಲಾಶಯದಿಂದ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದ್ದು 2023ರೊಳಗೆ ಕೆ.ಆರ್.ಪೇಟೆ, ಪಾಂಡವಪುರ, ನಾಗಮಂಗಲ ತಾಲ್ಲೂಕುಗಳಿಗೆ ಶಾಶ್ವತವಾಗಿ ಕುಡಿಯುವ ನೀರು ಪೂರೈಕೆಯಾಗಲಿದೆ.</p>.<p>ಮೂರೂ ತಾಲ್ಲೂಕುಗಳ ಹಳ್ಳಿಗಳಿಗೆ ಪ್ರತಿ ಮನೆಮನೆಗೆ ನಲ್ಲಿ ನೀರು ಪೂರೈಕೆ, ನಾಗಮಂಗಲ ತಾಲ್ಲೂಕಿನ ಬಿ.ಜಿ.ನಗರ, ಕೆ.ಆರ್.ಪೇಟೆ ತಾಲ್ಲೂಕಿನ 5 ವಸತಿ ಶಾಲೆಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಯೋಜನೆ ಜಾರಿ ಸನ್ನಿಹಿತವಾಗಿದೆ.</p>.<p>ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶಕ್ಕೆ 55 ಎಲ್ಪಿಸಿಡಿ ( ಲೀಟರ್ ಪರ್ ಕ್ಯಾಪಿಟ ಪರ್ ಡೇ), ಪಟ್ಟಣ ಪ್ರದೇಶಕ್ಕೆ 135 ಎಲ್ಪಿಸಿಡಿ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಮೂರು ತಿಂಗಳೊಳಗಾಗಿ ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. 30 ತಿಂಗಳೊಳಗಾಗಿ ಯೋಜನೆಯನ್ನು ಪೂರ್ಣಗೊಳಿಸಿ, ಯೋಜನೆಯ ರೂಪು ರೇಷೆಯಂತೆ ಯೋಜನೆ ಜಾರಿಯ ಉದ್ದೇಶ ಹೊಂದಲಾಗಿದೆ.</p>.<p>ಕೆ.ಆರ್.ಪೇಟೆ ತಾಲೂಕಿನ 310 ಹಳ್ಳಿಗಳು, ನಾಗಮಂಗಲ ತಾಲೂಕಿನ 391 ಹಳ್ಳಿಗಳು, ಬೆಳ್ಳೂರು ಪಟ್ಟಣ ಪಂಚಾಯತಿ, ಪಾಂಡವಪುರ ತಾಲೂಕಿನ 96 ಹಳ್ಳಿಗಳು ಸೇರಿ ಒಟ್ಟು 791 ಕ್ಕು ಹೆಚ್ಚು ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತಲುಪಲಿದೆ.</p>.<p>ಈ ಯೋಜನೆಯಿಂದ ಒಟ್ಟು 4,16,568 ಜನರಿಗೆ ಈ ಯೋಜನೆ ಲಾಭವಾgಲಿದೆ. ಕೆ.ಆರ್. ಪೇಟೆ ತಾಲ್ಲೂಕಿನ 1,95,112 ಜನರಿಗೆ, ನಾಗಮಂಗಲ ತಾಲ್ಲೂಕಿನ 1,31,221 ಜನರಿಗೆ ಹಾಗೂ ಪಾಂಡವಪುರದ 90,235 ಜನರಿಗೆ ಕುಡಿಯುವ ನೀರು ದೊರೆಯಲಿದೆ.</p>.<p><strong>ಸಂತಸ ವ್ಯಕ್ತಪಡಿಸಿದ ಉಸ್ತುವಾರಿ ಸಚಿವ</strong>: ‘ಅಭಿವೃದ್ಧಿಯ ವಿಚಾರದಲ್ಲಿ ನಾನು ಯಾವುದೇ ರಾಜಕಾರಣ ಮಾಡುವುದಿಲ್ಲ, ಚುನಾವಣೆಯಲ್ಲಿ ಮಾತ್ರ ರಾಜಕೀಯ. ಪಕ್ಷ ಭೇದ ಮರೆತು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವುದೇ ನನ್ನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ಸಾಕಷ್ಟು ಶ್ರಮಿಸಿದ್ದೇನೆ. ಯೋಜನೆಗೆ ಅನುಮೋದನೆ ದೊರೆತಿರುವುದು ಸಂತಸ ತಂದಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಸಂತಸ ವ್ಯಕ್ತಪಡಿಸಿದ್ದಾರೆ.</p>.<p>‘ಈ ಯೋಜನೆಗೆ ಮಂಜೂರಾತಿ ದೊರಕಿಸಿಕೊಡಲು ಸಹಕರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸಚಿವ ಸಂಪುಟದ ಸಹುದ್ಯೋಗಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.</p>.<p><strong>ಯೋಜನೆ ಅಂಕಿ ಅಂಶ</strong></p>.<p>ಗ್ರಾಮೀಣ ವಸತಿ 797<br />ಪಟ್ಟಣ 04<br />ಜನಸಂಖ್ಯೆ 4.93 ಲಕ್ಷ<br />ಯೋಜನಾ ವೆಚ್ಚ ₹ 690.36 ಕೋಟಿ<br />ಕೇಂದ್ರದ ಪಾಲು ₹ 230.23 ಕೋಟಿ<br />ನಬಾರ್ಡ್ ಸಹಾಯ ₹ 297.79<br />ಯೋಜನಾ ಅವಧಿ 30 ತಿಂಗಳು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>