<p><strong>ಶ್ರೀರಂಗಪಟ್ಟಣ</strong>: ಕಾವೇರಿ ನದಿಯಲ್ಲಿ ಈಚೆಗೆ ಉಂಟಾದ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಪಟ್ಟಣದ ವೆಲ್ಲೆಸ್ಲಿ ಸೇತುವೆ ಸಂಪರ್ಕ ರಸ್ತೆ ಹಾಗೂ ಪಟ್ಟಣದಿಂದ ಗಂಜಾಂ ಸಂಪರ್ಕ ರಸ್ತೆ ಸೇರಿದಂತೆ ₹6 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಗುರುವಾರ ಚಾಲನೆ ನೀಡಿದರು.</p>.<p>ವೆಲ್ಲೆಸ್ಲಿ ಸೇತುವೆ ಸಂಪರ್ಕಿಸುವ ರಸ್ತೆಯನ್ನು ₹2 ಕೋಟಿ ವೆಚ್ಚದಲ್ಲಿ ಸಿಮೆಂಟ್ನಿಂದ ನಿರ್ಮಿಸಲಾಗುವುದು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಿಂದ ಗಂಜಾಂ ಗ್ರಾಮವನ್ನು ಸಂಪರ್ಕಿಸುವ ರಸ್ತೆಯನ್ನು ₹2 ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗುವುದು. ಪಟ್ಟಣ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಇತರ ರಸ್ತೆಗಳು ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಯಾಗಲಿವೆ ಎಂದು ತಿಳಿಸಿದರು.</p>.<p>ಜತೆಗೆ ದಸರಾ ಉತ್ಸವದ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯ ಇತರ ರಸ್ತೆಗಳನ್ನೂ ಅಭಿವೃದ್ಧಿ ಮಾಡಲಾಗುವುದು. ಆದ್ಯತೆ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.</p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಎಂ. ನಂದೀಶ್, ಪುರಸಭೆ ಮುಖ್ಯಾಧಿಕಾರಿ ಎಂ. ರಾಜಣ್ಣ, ಸದಸ್ಯ ಎಂ.ಎಲ್. ದಿನೇಶ್, ಎಇಇ ಜಸ್ವಂತ್, ಮುಖಂಡರಾದ ಎಲ್. ನಾಗರಾಜು, ಚನ್ನಪ್ಪ, ಎಂ. ಸುರೇಶ್, ಎಂ. ಲೋಕೇಶ್, ಆರ್. ಕೃಷ್ಣ, ಬಾಲು, ರಜಿನಿ, ರವಿಕುಮಾರ್, ಸೋಮಸುಂದರ್, ಗೋವಿಂದೇಗೌಡ, ಪ್ರಸನ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಕಾವೇರಿ ನದಿಯಲ್ಲಿ ಈಚೆಗೆ ಉಂಟಾದ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಪಟ್ಟಣದ ವೆಲ್ಲೆಸ್ಲಿ ಸೇತುವೆ ಸಂಪರ್ಕ ರಸ್ತೆ ಹಾಗೂ ಪಟ್ಟಣದಿಂದ ಗಂಜಾಂ ಸಂಪರ್ಕ ರಸ್ತೆ ಸೇರಿದಂತೆ ₹6 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಗುರುವಾರ ಚಾಲನೆ ನೀಡಿದರು.</p>.<p>ವೆಲ್ಲೆಸ್ಲಿ ಸೇತುವೆ ಸಂಪರ್ಕಿಸುವ ರಸ್ತೆಯನ್ನು ₹2 ಕೋಟಿ ವೆಚ್ಚದಲ್ಲಿ ಸಿಮೆಂಟ್ನಿಂದ ನಿರ್ಮಿಸಲಾಗುವುದು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಿಂದ ಗಂಜಾಂ ಗ್ರಾಮವನ್ನು ಸಂಪರ್ಕಿಸುವ ರಸ್ತೆಯನ್ನು ₹2 ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗುವುದು. ಪಟ್ಟಣ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಇತರ ರಸ್ತೆಗಳು ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಯಾಗಲಿವೆ ಎಂದು ತಿಳಿಸಿದರು.</p>.<p>ಜತೆಗೆ ದಸರಾ ಉತ್ಸವದ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯ ಇತರ ರಸ್ತೆಗಳನ್ನೂ ಅಭಿವೃದ್ಧಿ ಮಾಡಲಾಗುವುದು. ಆದ್ಯತೆ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.</p>.<p>ಟಿಎಪಿಸಿಎಂಎಸ್ ಅಧ್ಯಕ್ಷ ಎಂ. ನಂದೀಶ್, ಪುರಸಭೆ ಮುಖ್ಯಾಧಿಕಾರಿ ಎಂ. ರಾಜಣ್ಣ, ಸದಸ್ಯ ಎಂ.ಎಲ್. ದಿನೇಶ್, ಎಇಇ ಜಸ್ವಂತ್, ಮುಖಂಡರಾದ ಎಲ್. ನಾಗರಾಜು, ಚನ್ನಪ್ಪ, ಎಂ. ಸುರೇಶ್, ಎಂ. ಲೋಕೇಶ್, ಆರ್. ಕೃಷ್ಣ, ಬಾಲು, ರಜಿನಿ, ರವಿಕುಮಾರ್, ಸೋಮಸುಂದರ್, ಗೋವಿಂದೇಗೌಡ, ಪ್ರಸನ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>