<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ‘ಆತ್ಮಹತ್ಯೆಗೆ ಯತ್ನಿಸಿದ್ದ ಸಾರಿಗೆ ಸಂಸ್ಥೆ ಬಸ್ ಚಾಲಕ ಎಚ್.ಆರ್.ಜಗದೀಶ್ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು– ಬದುಕಿನ ನಡುವೆ ಹೋರಾಡುತ್ತಿದ್ದು, ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು’ ಎಂದು ಅವರ ಸಹೋದರ ರವಿಕುಮಾರ್ ಮನವಿ ಮಾಡಿದ್ದಾರೆ.</p>.<p>‘ಯಾರ ಒತ್ತಡದಿಂದ ಆತ್ಮಹತ್ಯೆಗೆ ಯತ್ನಿಸಿದರೆಂಬುದು ನಮಗೆ ಮುಖ್ಯವಲ್ಲ, ಅವರ ಜೀವ ಉಳಿಸಿಕೊಳ್ಳುವುದೇ ಮುಖ್ಯ’ ಎಂದು ಅವರು ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p>‘ಡೆತ್ನೋಟ್ನಲ್ಲಿ ಸಚಿವ ಚಲುವರಾಯಸ್ವಾಮಿಯವರ ಹೆಸರು ಹೇಗೆ ಬಂತೆಂಬುದು ಗೊತ್ತಿಲ್ಲ. ಯಾವ ಒತ್ತಡದ ಬಗ್ಗೆಯೂ ಅವರು ಹೇಳಿಕೊಂಡಿರಲಿಲ್ಲ. ಅತ್ತಿಗೆ ಗ್ರಾಮ ಪಂಚಾಯ್ತಿ ಸದಸ್ಯೆಯಾಗಿದ್ದರೂ ಅಣ್ಣ ಸರ್ಕಾರಿ ಉದ್ಯೋಗಿಯಾಗಿದ್ದರಿಂದ ರಾಜಕೀಯದಲ್ಲಿ ಗುರುತಿಸಿಕೊಂಡಿರಲಿಲ್ಲ’ ಎಂದರು.</p>.<p>‘ಐಸಿಯುನಲ್ಲಿರುವ ಅಣ್ಣನ ಬಗ್ಗೆ ಸದ್ಯ ಏನೂ ಹೇಳಲಾಗದು ಎಂದು ವೈದ್ಯರು ತಿಳಿಸಿದ್ದಾರೆ. ಪ್ರಜ್ಞೆ ಬಂದಿದ್ದರೂ ಮಾತನಾಡುವ ಸ್ಥಿತಿಯಲ್ಲಿಲ್ಲ’ ಎಂದರು.</p>.<p>ಚಾಲಕ ಜಗದೀಶ್ ಅವರ ಪತ್ನಿ ಪಾವನಾ ಮಾತನಾಡಲು ನಿರಾಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ‘ಆತ್ಮಹತ್ಯೆಗೆ ಯತ್ನಿಸಿದ್ದ ಸಾರಿಗೆ ಸಂಸ್ಥೆ ಬಸ್ ಚಾಲಕ ಎಚ್.ಆರ್.ಜಗದೀಶ್ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು– ಬದುಕಿನ ನಡುವೆ ಹೋರಾಡುತ್ತಿದ್ದು, ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು’ ಎಂದು ಅವರ ಸಹೋದರ ರವಿಕುಮಾರ್ ಮನವಿ ಮಾಡಿದ್ದಾರೆ.</p>.<p>‘ಯಾರ ಒತ್ತಡದಿಂದ ಆತ್ಮಹತ್ಯೆಗೆ ಯತ್ನಿಸಿದರೆಂಬುದು ನಮಗೆ ಮುಖ್ಯವಲ್ಲ, ಅವರ ಜೀವ ಉಳಿಸಿಕೊಳ್ಳುವುದೇ ಮುಖ್ಯ’ ಎಂದು ಅವರು ‘ಪ್ರಜಾವಾಣಿ‘ಗೆ ತಿಳಿಸಿದರು.</p>.<p>‘ಡೆತ್ನೋಟ್ನಲ್ಲಿ ಸಚಿವ ಚಲುವರಾಯಸ್ವಾಮಿಯವರ ಹೆಸರು ಹೇಗೆ ಬಂತೆಂಬುದು ಗೊತ್ತಿಲ್ಲ. ಯಾವ ಒತ್ತಡದ ಬಗ್ಗೆಯೂ ಅವರು ಹೇಳಿಕೊಂಡಿರಲಿಲ್ಲ. ಅತ್ತಿಗೆ ಗ್ರಾಮ ಪಂಚಾಯ್ತಿ ಸದಸ್ಯೆಯಾಗಿದ್ದರೂ ಅಣ್ಣ ಸರ್ಕಾರಿ ಉದ್ಯೋಗಿಯಾಗಿದ್ದರಿಂದ ರಾಜಕೀಯದಲ್ಲಿ ಗುರುತಿಸಿಕೊಂಡಿರಲಿಲ್ಲ’ ಎಂದರು.</p>.<p>‘ಐಸಿಯುನಲ್ಲಿರುವ ಅಣ್ಣನ ಬಗ್ಗೆ ಸದ್ಯ ಏನೂ ಹೇಳಲಾಗದು ಎಂದು ವೈದ್ಯರು ತಿಳಿಸಿದ್ದಾರೆ. ಪ್ರಜ್ಞೆ ಬಂದಿದ್ದರೂ ಮಾತನಾಡುವ ಸ್ಥಿತಿಯಲ್ಲಿಲ್ಲ’ ಎಂದರು.</p>.<p>ಚಾಲಕ ಜಗದೀಶ್ ಅವರ ಪತ್ನಿ ಪಾವನಾ ಮಾತನಾಡಲು ನಿರಾಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>