<p><strong>ಮಂಡ್ಯ</strong>: ಗ್ರಾಮದಲ್ಲಿ ಅಕ್ರಮವಾಗಿ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡುರುವುದನ್ನು ಖಂಡಿಸಿ ತಾಲ್ಲೂಕಿನ ದುದ್ದ ಗ್ರಾಮಸ್ಥರು ನಗರದ ಅಬಕಾರಿ ಉಪ ಅಧೀಕ್ಷಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಬಾರ್ ಮತ್ತು ರೆಸ್ಟೋರೆಂಟ್ ಅನ್ನು ತೆರೆಯಲು ಅವಕಾಶ ನೀಡಿರುವ ಪಿಡಿಒ, ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಘೋಷಣೆ ಕೂಗಿದರು.</p>.<p>ಶಾಲಾ-ಕಾಲೇಜು ಸಮೀಪವೇ ತೆರೆದಿರುವ ಬಾರ್ ಮತ್ತು ರೆಸ್ಟೋರೆಂಟ್ ಅನ್ನು ಮುಚ್ಚಿಸಬೇಕು. ‘ಬೋರ್ಡಿಂಗ್ ಲಾಡ್ಜಿಂಗ್ ತೆರೆಯಲು ಅನುಮತಿ ನೀಡಲಾಗಿದೆ. ಗ್ರಾ.ಪಂ. ಸಭೆಯಲ್ಲಿ ಮಾಹಿತಿ ನೀಡದೆ, ಬಾರ್ ನಡೆಸಲು ಲೈಸೆನ್ಸ್ ನೀಡಿದ್ದಾರೆ ಎಂದು ಆರೋಪಿಸಿದರು.</p>.<p>ಪಂಚಾಯಿತಿ ಅನುಮತಿ ಇಲ್ಲದೆ ಯಾವುದೇ ವಾಣಿಜ್ಯ ಮಳಿಗೆ ಆಗಲಿ ಅಥವಾ ಅಂಗಡಿಗಳಿಗೆ ಲೈಸೆನ್ಸ್ ಪತ್ರವಿಲ್ಲದೆ ತೆರೆಯಲು ಸಾಧ್ಯವಿಲ್ಲ. ಅದರಲ್ಲೂ ಶಾಲೆ, ಕಾಲೇಜು, ಕುಟುಂಬಗಳು ವಾಸಿಸುವ ಸ್ಥಳದ ಸಮೀಪವೇ ಅವಕಾಶ ಏಕೆ ನೀಡಿದರು ಎಂದು ಪ್ರಶ್ನಿಸಿದರು.</p>.<p>ಗ್ರಾಮದ ಮುಖಂಡರಾದ ಶ್ರೇಯಸ್ ವೈ.ಗೌಡ, ಬಸಮಣಿ, ಲಕ್ಷ್ಮಮ್ಮ, ಪದ್ಮಾ, ಶ್ವೇತಾ, ರಾಮಚಂದ್ರ, ಪ್ರಸನ್ನ, ನಾಗರಾಜು, ಅನಿಲ್, ರಾಜಣ್ಣ, ನರಸಿಂಹೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಗ್ರಾಮದಲ್ಲಿ ಅಕ್ರಮವಾಗಿ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡುರುವುದನ್ನು ಖಂಡಿಸಿ ತಾಲ್ಲೂಕಿನ ದುದ್ದ ಗ್ರಾಮಸ್ಥರು ನಗರದ ಅಬಕಾರಿ ಉಪ ಅಧೀಕ್ಷಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಬಾರ್ ಮತ್ತು ರೆಸ್ಟೋರೆಂಟ್ ಅನ್ನು ತೆರೆಯಲು ಅವಕಾಶ ನೀಡಿರುವ ಪಿಡಿಒ, ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಘೋಷಣೆ ಕೂಗಿದರು.</p>.<p>ಶಾಲಾ-ಕಾಲೇಜು ಸಮೀಪವೇ ತೆರೆದಿರುವ ಬಾರ್ ಮತ್ತು ರೆಸ್ಟೋರೆಂಟ್ ಅನ್ನು ಮುಚ್ಚಿಸಬೇಕು. ‘ಬೋರ್ಡಿಂಗ್ ಲಾಡ್ಜಿಂಗ್ ತೆರೆಯಲು ಅನುಮತಿ ನೀಡಲಾಗಿದೆ. ಗ್ರಾ.ಪಂ. ಸಭೆಯಲ್ಲಿ ಮಾಹಿತಿ ನೀಡದೆ, ಬಾರ್ ನಡೆಸಲು ಲೈಸೆನ್ಸ್ ನೀಡಿದ್ದಾರೆ ಎಂದು ಆರೋಪಿಸಿದರು.</p>.<p>ಪಂಚಾಯಿತಿ ಅನುಮತಿ ಇಲ್ಲದೆ ಯಾವುದೇ ವಾಣಿಜ್ಯ ಮಳಿಗೆ ಆಗಲಿ ಅಥವಾ ಅಂಗಡಿಗಳಿಗೆ ಲೈಸೆನ್ಸ್ ಪತ್ರವಿಲ್ಲದೆ ತೆರೆಯಲು ಸಾಧ್ಯವಿಲ್ಲ. ಅದರಲ್ಲೂ ಶಾಲೆ, ಕಾಲೇಜು, ಕುಟುಂಬಗಳು ವಾಸಿಸುವ ಸ್ಥಳದ ಸಮೀಪವೇ ಅವಕಾಶ ಏಕೆ ನೀಡಿದರು ಎಂದು ಪ್ರಶ್ನಿಸಿದರು.</p>.<p>ಗ್ರಾಮದ ಮುಖಂಡರಾದ ಶ್ರೇಯಸ್ ವೈ.ಗೌಡ, ಬಸಮಣಿ, ಲಕ್ಷ್ಮಮ್ಮ, ಪದ್ಮಾ, ಶ್ವೇತಾ, ರಾಮಚಂದ್ರ, ಪ್ರಸನ್ನ, ನಾಗರಾಜು, ಅನಿಲ್, ರಾಜಣ್ಣ, ನರಸಿಂಹೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>