<p><strong>ಮಂಡ್ಯ:</strong> ಈದ್ ಮಿಲಾದ್ ಅಂಗವಾಗಿ ಶುಕ್ರವಾರ ಮುಸ್ಲಿಂ ಒಕ್ಕೂಟದ ವತಿಯಿಂದ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಕೋವಿಡ್ ಕಾರಣದಿಂದ ಜಿಲ್ಲೆಯಾದ್ಯಂತ ಮುಸ್ಲಿಮರು ಸರಳವಾಗಿ ಹಬ್ಬ ಆಚರಣೆ ಮಾಡಿದರು.</p>.<p>ಮೊಹಮ್ಮದ್ ಪೈಗಂಬರ್ ಜನ್ಮ ದಿನವನ್ನು ಪ್ರತಿ ವರ್ಷ ವೈಭವದಿಂದ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಸರಳ ಆಚರಣೆಗೆ ಸರ್ಕಾರ ಸಲಹೆ ನೀಡಿತ್ತು. ಅದರಂತೆ ಯಾವುದೇ ಮೆರವಣಿಗೆ, ಸಾಮೂಹಿಕ ಪ್ರಾರ್ಥನೆ ಇಲ್ಲದೆ ಮನೆಯಲ್ಲೇ ಆಚರಣೆ ಮಾಡಿದರು. ಕುಟುಂಬ ಸದಸ್ಯರು ಮನೆಯಲ್ಲೇ ಖುರಾನ್ ಪಠಣ ಮಾಡಿ, ಪ್ರಾರ್ಥನೆ ಸಲ್ಲಿಸಿದರು. ಗಾಂಧೀನಗರದ ಮಸೀದಿ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.</p>.<p>ಜಗತ್ತಿನ ಅವತಾರ ಪುರುಷರಲ್ಲಿ ಒಬ್ಬರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಜನ್ಮದಿನ ಕುರಿತು ಮುಸ್ಲಿಂ ಗುರುಗಳು ಮಸೀದಿಗಳಲ್ಲಿ ಸಂದೇಶ ನೀಡಿದರು. ಪೈಗಂಬರರ ಇತಿಹಾಸ, ತ್ಯಾಗ, ಬಲಿದಾನ ಸೇವೆಯ ಮಹತ್ವವನ್ನು ಸ್ಮರಿಸಲಾಯಿತು. ವಿವಿಧ ಮಸೀದಿಗಳಲ್ಲಿ ಮೌಲ್ವಿಗಳು ಪ್ರವಚನ ನೀಡಿದರು.</p>.<p>ಡಿಎಚ್ಒ ಡಾ.ಎಚ್.ಪಿ.ಮಂಚೇಗೌಡ, ಮುಸ್ಲಿಂ ಒಕ್ಕೂಟ ಅಧ್ಯಕ್ಷ ಮುಕ್ತಾರ್ ಅಹಮದ್, ವಕ್ಫ್ ಬೋರ್ಡ್ ಅಧ್ಯಕ್ಷ ಉಬೇದುಲ್ಲಾ, ಮೊಹಮದ್ ತಾಹೇರ್, ಮುಫ್ತಿ ರಿಜ್ವಾನ್ ಅಹಮದ್, ಅತೀಕ್, ಮುಸವೀರ್ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ ಮಾಡಿದರು.</p>.<p>ಅಭನಂದನೆ: ಮೈಸೂರು ವಿವಿಯಲ್ಲಿ ಕನ್ನಡ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಡಾ.ವಸೀಂ ಪಾಷಾ, ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ ಪಡೆದ ಆದಿಲ್ ಪಾಷಾ ಅವರನ್ನು ಆಜಾದ್ನಗರದ ಮಸೀದಿಯಲ್ಲಿ ಸನ್ಮಾನಿಸಲಾಯಿತು.</p>.<p>ಶೈಕ್ಷಣಿಕ ಮಾರ್ಗದರ್ಶಕ ಸಲೀಂ ಅಹಮದ್ ಮಾತನಾಡಿ ‘ಬಡ ಕುಟುಂಬದಿಂದ ಬಂದ ಇಬ್ಬರೂ ಕುಟುಂಬಕ್ಕೆ ಹೊರೆಯಾಗದೆ ತಾವೇ ದುಡಿದು ವಿದ್ಯಾಭ್ಯಾಸ ಮಾಡಿ ಉತ್ತಮ ಸಾಧನೆ ಮಾಡಿದ್ದಾರೆ. ಕನ್ನಡ ಮಾಧ್ಯಮಲ್ಲೇ ಓದಿದ ಅವರ ಸಾಧನೆ ಯುವಕರಿಗೆ ಸ್ಫೂರ್ತಿಯಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಈದ್ ಮಿಲಾದ್ ಅಂಗವಾಗಿ ಶುಕ್ರವಾರ ಮುಸ್ಲಿಂ ಒಕ್ಕೂಟದ ವತಿಯಿಂದ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಕೋವಿಡ್ ಕಾರಣದಿಂದ ಜಿಲ್ಲೆಯಾದ್ಯಂತ ಮುಸ್ಲಿಮರು ಸರಳವಾಗಿ ಹಬ್ಬ ಆಚರಣೆ ಮಾಡಿದರು.</p>.<p>ಮೊಹಮ್ಮದ್ ಪೈಗಂಬರ್ ಜನ್ಮ ದಿನವನ್ನು ಪ್ರತಿ ವರ್ಷ ವೈಭವದಿಂದ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಸರಳ ಆಚರಣೆಗೆ ಸರ್ಕಾರ ಸಲಹೆ ನೀಡಿತ್ತು. ಅದರಂತೆ ಯಾವುದೇ ಮೆರವಣಿಗೆ, ಸಾಮೂಹಿಕ ಪ್ರಾರ್ಥನೆ ಇಲ್ಲದೆ ಮನೆಯಲ್ಲೇ ಆಚರಣೆ ಮಾಡಿದರು. ಕುಟುಂಬ ಸದಸ್ಯರು ಮನೆಯಲ್ಲೇ ಖುರಾನ್ ಪಠಣ ಮಾಡಿ, ಪ್ರಾರ್ಥನೆ ಸಲ್ಲಿಸಿದರು. ಗಾಂಧೀನಗರದ ಮಸೀದಿ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.</p>.<p>ಜಗತ್ತಿನ ಅವತಾರ ಪುರುಷರಲ್ಲಿ ಒಬ್ಬರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಜನ್ಮದಿನ ಕುರಿತು ಮುಸ್ಲಿಂ ಗುರುಗಳು ಮಸೀದಿಗಳಲ್ಲಿ ಸಂದೇಶ ನೀಡಿದರು. ಪೈಗಂಬರರ ಇತಿಹಾಸ, ತ್ಯಾಗ, ಬಲಿದಾನ ಸೇವೆಯ ಮಹತ್ವವನ್ನು ಸ್ಮರಿಸಲಾಯಿತು. ವಿವಿಧ ಮಸೀದಿಗಳಲ್ಲಿ ಮೌಲ್ವಿಗಳು ಪ್ರವಚನ ನೀಡಿದರು.</p>.<p>ಡಿಎಚ್ಒ ಡಾ.ಎಚ್.ಪಿ.ಮಂಚೇಗೌಡ, ಮುಸ್ಲಿಂ ಒಕ್ಕೂಟ ಅಧ್ಯಕ್ಷ ಮುಕ್ತಾರ್ ಅಹಮದ್, ವಕ್ಫ್ ಬೋರ್ಡ್ ಅಧ್ಯಕ್ಷ ಉಬೇದುಲ್ಲಾ, ಮೊಹಮದ್ ತಾಹೇರ್, ಮುಫ್ತಿ ರಿಜ್ವಾನ್ ಅಹಮದ್, ಅತೀಕ್, ಮುಸವೀರ್ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ ಮಾಡಿದರು.</p>.<p>ಅಭನಂದನೆ: ಮೈಸೂರು ವಿವಿಯಲ್ಲಿ ಕನ್ನಡ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಡಾ.ವಸೀಂ ಪಾಷಾ, ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ ಪಡೆದ ಆದಿಲ್ ಪಾಷಾ ಅವರನ್ನು ಆಜಾದ್ನಗರದ ಮಸೀದಿಯಲ್ಲಿ ಸನ್ಮಾನಿಸಲಾಯಿತು.</p>.<p>ಶೈಕ್ಷಣಿಕ ಮಾರ್ಗದರ್ಶಕ ಸಲೀಂ ಅಹಮದ್ ಮಾತನಾಡಿ ‘ಬಡ ಕುಟುಂಬದಿಂದ ಬಂದ ಇಬ್ಬರೂ ಕುಟುಂಬಕ್ಕೆ ಹೊರೆಯಾಗದೆ ತಾವೇ ದುಡಿದು ವಿದ್ಯಾಭ್ಯಾಸ ಮಾಡಿ ಉತ್ತಮ ಸಾಧನೆ ಮಾಡಿದ್ದಾರೆ. ಕನ್ನಡ ಮಾಧ್ಯಮಲ್ಲೇ ಓದಿದ ಅವರ ಸಾಧನೆ ಯುವಕರಿಗೆ ಸ್ಫೂರ್ತಿಯಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>